ಓದುಗರ ಪತ್ರ
ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿ ಕೆಲವು ಕಡೆ ರಸ್ತೆ ಕುಸಿದು ಗುಂಡಿ ನಿರ್ಮಾಣವಾಗಿದ್ದು, ರಾತ್ರಿ ವೇಳೆ ದ್ವಿಚಕ್ರ ವಾಹನ ಸವಾರರು ಆಕಸ್ಮಿಕವಾಗಿ ಗುಂಡಿಯತ್ತ ಸಾಗಿದರೆ ಅಪಾಯ ಎದುರಾಗುವ ಸಾಧ್ಯತೆಯಿದೆ. ಈ ರಸ್ತೆಯ ನಡುವೆ ಒಳಚರಂಡಿ ಪೈಪ್ ಲೈನ್ ಹಾಕಿದ್ದು, ಆ ಸಂದರ್ಭದಲ್ಲಿ ನಡೆಸಿರುವ ಅಸಮರ್ಪಕ ಕಾಮಗಾರಿಯಿಂದಾಗಿ ಈ ರಸ್ತೆಯಲ್ಲಿ ಹಲವಾರು ಬಾರಿ ರಸ್ತೆ ಕುಸಿತ ಉಂಟಾಗಿದೆ. ಆದರೂ ಮಹಾನಗರ ಪಾಲಿಕೆಯವರು ನೆಪಮಾತ್ರಕ್ಕೆ ಗುಂಡಿ ಮುಚ್ಚುವುದೇ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಲು ಕಾರಣವಾಗಿದೆ.
ಮಹಾನಗರ ಪಾಲಿಕೆ ಸದಸ್ಯರ ಅಧಿಕಾರಾವಧಿ ಮುಗಿದು ವರ್ಷಗಳೇ ಕಳೆದಿವೆ. ಚಾಮರಾಜ ಕ್ಷೇತ್ರದ ಶಾಸಕರಾದ ಕೆ.ಹರೀಶ್ ಗೌಡರು ಇತ್ತ ಸುಳಿಯುವುದೇ ಇಲ್ಲ. ಹಾಗಾದರೆ ಸಾರ್ವಜನಿಕರ ಸಮಸ್ಯೆಗಳನ್ನು ಯಾರು ಪರಿಹರಿಸಬೇಕು ಎನ್ನುವ ಪ್ರಶ್ನೆ ಎದುರಾಗಿದೆ. ಈಗಲಾದರೂ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಗುಂಡಿ ಬಿದ್ದಿರುವ ರಸ್ತೆ ಯನ್ನು ಸರಿಪಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.
– ಚಂದ್ರಶೇಖರ್, ಡಿ.ಸುಬ್ಬಯ್ಯ ರಸ್ತೆ, ಮೈಸೂರು
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…