ಓದುಗರ ಪತ್ರ
ಮೈಸೂರು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ, ಕಾವೇರಿ ಶಾಲೆ, ಶ್ರೀ ಚಂದ್ರಮೌಳೇಶ್ವರ ದೇವಾಲಯ ಮತ್ತು ಎಂಡಿಎ ಕಮಿಷನರ್ ಮನೆಯ ಮುಂಭಾಗದ ಕಾವೇರಿ ಶಾಲೆಯ ಸರ್ಕಲ್, ಆದಿಚುಂಚನಗಿರಿ ರಸ್ತೆಯಿಂದ ಜ್ಞಾನ ಗಂಗಾ ಶಾಲೆಯ ಕಡೆಗೆ ಹೋಗುವ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಳೆದ ಆರು ತಿಂಗಳುಗಳ ಹಿಂದೆ ಅಗೆದಿರು ವುದರಿಂದ ಈ ರಸ್ತೆಯು ಗುಂಡಿ ಮಯವಾಗಿದೆ, ಈ ಕಾರಣದಿಂದ ಪ್ರತಿ ದಿನವೂ ಇಲ್ಲಿ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಲೇ ಇದೆ..
ಬಹುತೇಕ ನಗರ ಪಾಲಿಕೆಯ ಅಧಿಕಾರಿಗಳು ಈ ರಸ್ತೆಯಲ್ಲೇ ಓಡಾಡುತ್ತಿದ್ದರೂ, ಕನಿಷ್ಠ ಪಕ್ಷ ಈ ಗುಂಡಿಗಳನ್ನು ಮುಚ್ಚಿಸುವಷ್ಟು ತಿಳಿವಳಿಕೆ ಅವರಿಗೆ ಇಲ್ಲವೇ? ಇದು ಕೇವಲ ಆದಿಚುಂಚನಗಿರಿ ರಸ್ತೆಯ ಸಮಸ್ಯೆಯಲ್ಲ, ಒಳಚರಂಡಿ ವ್ಯವಸ್ಥೆಗಾಗಿ ರಸ್ತೆಯನ್ನು ಅಗೆದು ಹಾಗೆ ಯೇ ಬಿಟ್ಟಿರುವ ಹತ್ತಾರು ರಸ್ತೆಗಳು ಮೈಸೂರು ನಗರದಲ್ಲಿವೆ. ಮೊದಲು ಅಗೆದಿರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರು ಸುಗಮವಾಗಿ ಸಂಚರಿಸಲು ಅನುಕೂಲ ಕಲ್ಪಿಸುವುದು ಅಗತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…