ಓದುಗರ ಪತ್ರ
ಮೈಸೂರು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ, ಕಾವೇರಿ ಶಾಲೆ, ಶ್ರೀ ಚಂದ್ರಮೌಳೇಶ್ವರ ದೇವಾಲಯ ಮತ್ತು ಎಂಡಿಎ ಕಮಿಷನರ್ ಮನೆಯ ಮುಂಭಾಗದ ಕಾವೇರಿ ಶಾಲೆಯ ಸರ್ಕಲ್, ಆದಿಚುಂಚನಗಿರಿ ರಸ್ತೆಯಿಂದ ಜ್ಞಾನ ಗಂಗಾ ಶಾಲೆಯ ಕಡೆಗೆ ಹೋಗುವ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಳೆದ ಆರು ತಿಂಗಳುಗಳ ಹಿಂದೆ ಅಗೆದಿರು ವುದರಿಂದ ಈ ರಸ್ತೆಯು ಗುಂಡಿ ಮಯವಾಗಿದೆ, ಈ ಕಾರಣದಿಂದ ಪ್ರತಿ ದಿನವೂ ಇಲ್ಲಿ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಲೇ ಇದೆ..
ಬಹುತೇಕ ನಗರ ಪಾಲಿಕೆಯ ಅಧಿಕಾರಿಗಳು ಈ ರಸ್ತೆಯಲ್ಲೇ ಓಡಾಡುತ್ತಿದ್ದರೂ, ಕನಿಷ್ಠ ಪಕ್ಷ ಈ ಗುಂಡಿಗಳನ್ನು ಮುಚ್ಚಿಸುವಷ್ಟು ತಿಳಿವಳಿಕೆ ಅವರಿಗೆ ಇಲ್ಲವೇ? ಇದು ಕೇವಲ ಆದಿಚುಂಚನಗಿರಿ ರಸ್ತೆಯ ಸಮಸ್ಯೆಯಲ್ಲ, ಒಳಚರಂಡಿ ವ್ಯವಸ್ಥೆಗಾಗಿ ರಸ್ತೆಯನ್ನು ಅಗೆದು ಹಾಗೆ ಯೇ ಬಿಟ್ಟಿರುವ ಹತ್ತಾರು ರಸ್ತೆಗಳು ಮೈಸೂರು ನಗರದಲ್ಲಿವೆ. ಮೊದಲು ಅಗೆದಿರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರು ಸುಗಮವಾಗಿ ಸಂಚರಿಸಲು ಅನುಕೂಲ ಕಲ್ಪಿಸುವುದು ಅಗತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಮೈಸೂರು : ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಜಾ.ದಳದಿಂದ ಕ್ರಾಸ್ ವೋಟ್ ಮಾಡಿದ ನಾಲ್ಕು ಜನರು ಯಾರೆಂದು ಗೊತ್ತಿದೆ.…
ಮಂಡ್ಯ : ಜಿಲ್ಲೆಯ ವಿವಿಧೆಡೆ ನಡೆದ 21 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿ 553 ಗ್ರಾಂ…
ಮೈಸೂರು : ಜಿಲ್ಲೆಯಲ್ಲಿ ನೀಟ್ ಪರೀಕ್ಷೆಯನ್ನು ಯಾವುದೇ ಲೋಪ ಉಂಟಾಗದಂತೆ ವ್ಯವಸ್ಥಿತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಿ ಎಂದು ಅಪರ…
ಹೊಸದಿಲ್ಲಿ : ನೀಟ್-ಯುಜಿ 2026 ಮರುಪರೀಕ್ಷೆ ಹಿನ್ನೆಲೆ ಟೆಲಿಗ್ರಾಂನ್ನು ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ದೆಹಲಿ ಹೈಕೋರ್ಟ್ ಎತ್ತಿಹಿಡಿದಿದೆ.…
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…