ಓದುಗರ ಪತ್ರ
ಮೈಸೂರು ನಗರದ ಆದಿಚುಂಚನಗಿರಿ ಮುಖ್ಯ ರಸ್ತೆಯ, ಕಾವೇರಿ ಶಾಲೆ, ಶ್ರೀ ಚಂದ್ರಮೌಳೇಶ್ವರ ದೇವಾಲಯ ಮತ್ತು ಎಂಡಿಎ ಕಮಿಷನರ್ ಮನೆಯ ಮುಂಭಾಗದ ಕಾವೇರಿ ಶಾಲೆಯ ಸರ್ಕಲ್, ಆದಿಚುಂಚನಗಿರಿ ರಸ್ತೆಯಿಂದ ಜ್ಞಾನ ಗಂಗಾ ಶಾಲೆಯ ಕಡೆಗೆ ಹೋಗುವ ರಸ್ತೆಯಲ್ಲಿ ಒಳಚರಂಡಿ ವ್ಯವಸ್ಥೆ ಕಲ್ಪಿಸಲು ಕಳೆದ ಆರು ತಿಂಗಳುಗಳ ಹಿಂದೆ ಅಗೆದಿರು ವುದರಿಂದ ಈ ರಸ್ತೆಯು ಗುಂಡಿ ಮಯವಾಗಿದೆ, ಈ ಕಾರಣದಿಂದ ಪ್ರತಿ ದಿನವೂ ಇಲ್ಲಿ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಲೇ ಇದೆ..
ಬಹುತೇಕ ನಗರ ಪಾಲಿಕೆಯ ಅಧಿಕಾರಿಗಳು ಈ ರಸ್ತೆಯಲ್ಲೇ ಓಡಾಡುತ್ತಿದ್ದರೂ, ಕನಿಷ್ಠ ಪಕ್ಷ ಈ ಗುಂಡಿಗಳನ್ನು ಮುಚ್ಚಿಸುವಷ್ಟು ತಿಳಿವಳಿಕೆ ಅವರಿಗೆ ಇಲ್ಲವೇ? ಇದು ಕೇವಲ ಆದಿಚುಂಚನಗಿರಿ ರಸ್ತೆಯ ಸಮಸ್ಯೆಯಲ್ಲ, ಒಳಚರಂಡಿ ವ್ಯವಸ್ಥೆಗಾಗಿ ರಸ್ತೆಯನ್ನು ಅಗೆದು ಹಾಗೆ ಯೇ ಬಿಟ್ಟಿರುವ ಹತ್ತಾರು ರಸ್ತೆಗಳು ಮೈಸೂರು ನಗರದಲ್ಲಿವೆ. ಮೊದಲು ಅಗೆದಿರುವ ರಸ್ತೆಗಳ ಗುಂಡಿಗಳನ್ನು ಮುಚ್ಚಿ ಸಾರ್ವಜನಿಕರು ಸುಗಮವಾಗಿ ಸಂಚರಿಸಲು ಅನುಕೂಲ ಕಲ್ಪಿಸುವುದು ಅಗತ್ಯ.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ, ಮೈಸೂರು
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…