ಓದುಗರ ಪತ್ರ
ರಾಜ್ಯದಲ್ಲಿ ಸುಮಾರು ೭ ಲಕ್ಷಕ್ಕೂ ಹೆಚ್ಚು ಅನರ್ಹರು ಪಡೆದಿದ್ದ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಅವುಗಳನ್ನು ಎಪಿಎಲ್ ಕಾರ್ಡ್ಗಳನ್ನಾಗಿ ಬದಲಾವಣೆ ಮಾಡುವುದಾಗಿ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್. ಮುನಿಯಪ್ಪ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಅನರ್ಹರು ಇಷ್ಟು ವರ್ಷಗಳ ಕಾಲ ಬಿಪಿಎಲ್ ಪಡಿತರ ಚೀಟಿ ಯಿಂದ ಸರ್ಕಾರದ ಅನ್ನಭಾಗ್ಯದ ಯೋಜನೆ ಸೇರಿದಂತೆ ವಿವಿಧ ಸವಲತ್ತುಗಳನ್ನು ಪಡೆದಿರುವುದು ಅಕ್ಷಮ್ಯ ಅಪರಾಧ ಮತ್ತು ಸರ್ಕಾರಕ್ಕೆ ಮಾಡಿದ ಮೋಸ. ಇವರು ಎಷ್ಟು ವರ್ಷಗಳಿಂದ ಸೌಲಭ್ಯಗಳನ್ನು ಪಡೆ ದಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಒಟ್ಟಾರೆ ಮೌಲ್ಯವನ್ನು ನಗದು ರೂಪದಲ್ಲಿ ಸರ್ಕಾರಕ್ಕೆ ವಾಪಸ್ ನೀಡುವಂತೆ ಕಾನೂನು ಕ್ರಮ ಕೈಗೊಳ್ಳಬೇಕು. ಇದರೊಂದಿಗೆ ಅನರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ನೆರವಾದ ಅಽಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…