Andolana originals

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ ಯೋಚಿಸಬೇಕಾದ ಸಂಗತಿಗಳು ನಡೆಯುತ್ತಿವೆ. ಮೈಸೂರು ನಗರ ವ್ಯಾಪ್ತಿಯಲ್ಲಿ ಆತಂಕ ಮೂಡಿಸುವ ಘಟನೆಗಳು ಕಡಿಮೆಯಾಗು ತ್ತಿಲ್ಲವೇನೋ ಎಂಬ ಚಿಂತಿಯೂ ಶಾಂತಿಪ್ರಿಯರನ್ನು ಕಾಡುತ್ತಿದೆ.

ಅಲ್ಲದೆ ನಗರದಲ್ಲಿ ಆನೇಕ ದ್ವಿಚಕ್ರ ವಾಹನಗಳು ನಂಬರ್ ಪ್ಲೇಟ್ ಇಲ್ಲದೇ ಸಂಚರಿಸುತ್ತಿವೆ. ನಾನಾ ಕಡೆ ವಾಹನಗಳಿಗೆ ದಂಡ ಹಾಕುವ ಉತ್ಸಾಹ ಸಂಚಾರ ಪೊಲೀಸರು ತೋರುತ್ತಿದ್ದರೂ ನಂಬರ್ ಪ್ಲೇಟ್ ಇಲ್ಲದ, ಹೆಲ್ಮೆಟ್ ಧರಿಸದ, ಏಕಮುಖ ರಸ್ತೆಯನ್ನೂ ಲೆಕ್ಕಕ್ಕಿಡದೆ ಆನೇಕ ವಾಹನಗಳು ಓಡಾಡುವುದನ್ನೂ ಕಾಣಬಹುದು. ಪೊಲೀಸರನ್ನು ಕಂಡರೆ ಹಿಂತಿರುಗಿಸಿಕೊಂಡು, ಇಲ್ಲವೆ ಹೇಗೋ ಪಾರಾಗಿ ಹೋಗುವ ಚತುರರೂ ಇರುತ್ತಾರೆ. ದಂಡ ವಸೂಲಿಯೊಂದೇ ಗುರಿಯಾಗಿಟ್ಟುಕ್ಕೊಳ್ಳದೆ ದ್ವಿಚಕ್ರವಾಹನ ಸವಾರರು ಹಾಗೂ ಒಟ್ಟಾರೆ ವಾಹನ ಸವಾರರು ಸಂಚಾರ ನಿಯಮ ಪಾಲಿಸುವ ಭಯ ಇಲ್ಲವೆ ಶಿಸ್ತು ಮೂಡುವಂತೆ ಮಾಡಿದರೆ ಅದು ಶ್ಲಾಘನೀಯ ಕೆಲಸವಾಗುತ್ತದೆ.

ನಂಬರ್ ಪ್ಲೇಟ್ ಇಲ್ಲದೇ ರಸ್ತೆಗಳಲ್ಲಿ ವಾಹನಗಳು ಓಡಾಡಬವಂತಾದರೆ ಸಮಾಜಘಾತುಕ ಕೆಲಸಗಳಿಗೆ ಅನುವು ಮಾಡಿಕೊಟ್ಟಂತಲ್ಲವೇ? ಸರಗಳ್ಳರು, ದರೋಡೆ, ಸಮಾಜಘಾತುಕ ಕೃತ್ಯ ಏಸಗುವವರಿಗೆ ಇದು ಅನುಕೂಲವಾಗುತ್ತದೆ. ಈ ಬಗ್ಗೆ ಪೊಲೀಸ್ ಆಯುಕ್ತರು ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟು ಮೈಸೂರಿನಲ್ಲಿ ಆದಷ್ಟು ಶಾಂತಿ ಹಾಗೂ ಸಂಯಮದ ವಾತಾವರಣ ಮುಂದುವರಿಯುವಂತೆ ನೋಡಿಕೊಳ್ಳಬೇಕು.

-ಹೆಚ್. ಪಿ. ಮಹದೇವಸ್ವಾಮಿ ಹೊರಳಹಳ್ಳಿ, ತಿ. ನರಸೀಪುರ ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

52 seconds ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

3 mins ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

7 mins ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

12 mins ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

16 mins ago

ದೇವರ ನಾಡು ಕೇರಳದಲ್ಲಿ ಜೆನ್ ಝೀಗಳ ಸಾಮರಸ್ಯ ಮ್ಯಾಜಿಕ್

ಅಕ್ಷತಾ ಆಗಸ್ಟ್ ೨೧, ಕೇರಳದ ಕೋಝಿಕ್ಕೋಡ್‌ನ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಓಣಂ ಹಬ್ಬದ ಆಚರಣೆಗೆ ಅಣಿಯಾಗುತ್ತಿದ್ದರು. ಅಂದಿನ ರಾತ್ರಿ ಓಣಂ…

21 mins ago