Andolana originals

ಓದುಗರ ಪತ್ರ: ಸಿಸಿ ರಸ್ತೆ, ಚರಂಡಿ ಕಾಮಗಾರಿ ಪೂರ್ಣಗೊಳಿಸಿ

ಮೈಸೂರಿನಿಂದ ಎಚ್.ಡಿ. ಕೋಟೆಗೆ ತೆರಳುವ ಮಾನಂದವಾಡಿ ಮುಖ್ಯ ರಸ್ತೆಯಲ್ಲಿ ಸಿಗುವ ಹೈರಿಗೆ ಗ್ರಾಮವು ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ. ಆದರೆ ನೀರಾವರಿ ಇಲಾಖೆಯಿಂದ ಗ್ರಾಮದ ಪೌರ ಕಾರ್ಮಿಕರ ಬೀದಿಗೆ ಸುಮಾರು ೨೮ ಲಕ್ಷ ರೂ.ವೆಚ್ಚದಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಲು ಹಾಗೂ ಸಿಸಿ ರಸ್ತೆ ವ್ಯವಸ್ಥೆ ನಿರ್ಮಾಣಕ್ಕೆ ಕ್ರಿಯಾಯೋಜನೆ ಮಾಡಲಾಗಿತ್ತು, ಆದರೆ ಗುತ್ತಿಗೆದಾರರು ಚರಂಡಿ ಕಾಮಗಾರಿ ಹಾಗೂ ಸಿಸಿ ರಸ್ತೆ ಕಾಮಗಾರಿಯನ್ನು ಅರ್ಧಂಬರ್ಧ ಮಾಡಿ ಬಿಲ್ ಮಾಡಿಸಿಕೊಂಡು ಅರ್ಧಕ್ಕೆ ಕೈ ಬಿಟ್ಟಿದ್ದಾರೆ.

ಈ ವಿಚಾರಕ್ಕೆ ಸಂಬಂಧಪಟ್ಟ ವಾರ್ಡ್‌ನ ಸದಸ್ಯರು, ಸಂಬಂಧಪಟ್ಟ ಇಲಾಖೆಗೆ ಮನವಿ ಪತ್ರ ನೀಡಿದರೂ ಈ ಬಗ್ಗೆ ಕ್ರಮಕೈಗೊಂಡಿಲ್ಲ. ಹೀಗಾಗಿ ಪೌರ ಕಾರ್ಮಿಕರ ಬೀದಿಯಲ್ಲಿ ನಿರ್ಮಿಸಿರುವ ಚರಂಡಿ ಭೂಮಿಯಿಂದ ಎರಡು ಅಡಿ ಎತ್ತರದಲ್ಲಿದೆ. ಈ ಬೀದಿಯಲ್ಲಿ ಸಣ್ಣ ಮಕ್ಕಳು ಮನೆಯಿಂದ ಬೀದಿಗೆ ಬರಬೇಕಾದರೆ ಬಹಳ ಹರಸಾಹಸ ಪಡುತ್ತಿದ್ದಾರೆ. ಎಷ್ಟೋ ಮಕ್ಕಳು ಮನೆಯ ಮುಂದೆ ನಿರ್ಮಾಣವಾಗಿರುವ ಚರಂಡಿಗೆ ಬಿದ್ದಿರುವ ಘಟನೆಗಳೂ ನಡೆದಿವೆ.

ಆದ್ದರಿಂದ ಬಾಕಿ ಇರುವ ಕಾಮಗಾರಿಯನ್ನು ತಕ್ಷಣ ಪೂರ್ಣ ಗೊಳಿಸಬೇಕು. ಅಧಿಕಾರಿಗಳು, ಶಾಸಕರು, ಸಂಸದರು ಗುತ್ತಿಗೆದಾರರನ್ನು ಕರೆಸಿ ಪೌರಕಾರ್ಮಿಕರ ಬೀದಿಯಲ್ಲಿ ಉಳಿದಿರುವ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.

– ಸಿದ್ದಲಿಂಗೇಗೌಡ,ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

7 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

8 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

8 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

14 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

14 hours ago