ಓದುಗರ ಪತ್ರ
ಮೈಸೂರಿನಿಂದ ಎಚ್.ಡಿ. ಕೋಟೆಗೆ ತೆರಳುವ ಮಾನಂದವಾಡಿ ಮುಖ್ಯ ರಸ್ತೆಯಲ್ಲಿ ಸಿಗುವ ಹೈರಿಗೆ ಗ್ರಾಮವು ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ. ಆದರೆ ನೀರಾವರಿ ಇಲಾಖೆಯಿಂದ ಗ್ರಾಮದ ಪೌರ ಕಾರ್ಮಿಕರ ಬೀದಿಗೆ ಸುಮಾರು ೨೮ ಲಕ್ಷ ರೂ.ವೆಚ್ಚದಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಲು ಹಾಗೂ ಸಿಸಿ ರಸ್ತೆ ವ್ಯವಸ್ಥೆ ನಿರ್ಮಾಣಕ್ಕೆ ಕ್ರಿಯಾಯೋಜನೆ ಮಾಡಲಾಗಿತ್ತು, ಆದರೆ ಗುತ್ತಿಗೆದಾರರು ಚರಂಡಿ ಕಾಮಗಾರಿ ಹಾಗೂ ಸಿಸಿ ರಸ್ತೆ ಕಾಮಗಾರಿಯನ್ನು ಅರ್ಧಂಬರ್ಧ ಮಾಡಿ ಬಿಲ್ ಮಾಡಿಸಿಕೊಂಡು ಅರ್ಧಕ್ಕೆ ಕೈ ಬಿಟ್ಟಿದ್ದಾರೆ.
ಈ ವಿಚಾರಕ್ಕೆ ಸಂಬಂಧಪಟ್ಟ ವಾರ್ಡ್ನ ಸದಸ್ಯರು, ಸಂಬಂಧಪಟ್ಟ ಇಲಾಖೆಗೆ ಮನವಿ ಪತ್ರ ನೀಡಿದರೂ ಈ ಬಗ್ಗೆ ಕ್ರಮಕೈಗೊಂಡಿಲ್ಲ. ಹೀಗಾಗಿ ಪೌರ ಕಾರ್ಮಿಕರ ಬೀದಿಯಲ್ಲಿ ನಿರ್ಮಿಸಿರುವ ಚರಂಡಿ ಭೂಮಿಯಿಂದ ಎರಡು ಅಡಿ ಎತ್ತರದಲ್ಲಿದೆ. ಈ ಬೀದಿಯಲ್ಲಿ ಸಣ್ಣ ಮಕ್ಕಳು ಮನೆಯಿಂದ ಬೀದಿಗೆ ಬರಬೇಕಾದರೆ ಬಹಳ ಹರಸಾಹಸ ಪಡುತ್ತಿದ್ದಾರೆ. ಎಷ್ಟೋ ಮಕ್ಕಳು ಮನೆಯ ಮುಂದೆ ನಿರ್ಮಾಣವಾಗಿರುವ ಚರಂಡಿಗೆ ಬಿದ್ದಿರುವ ಘಟನೆಗಳೂ ನಡೆದಿವೆ.
ಆದ್ದರಿಂದ ಬಾಕಿ ಇರುವ ಕಾಮಗಾರಿಯನ್ನು ತಕ್ಷಣ ಪೂರ್ಣ ಗೊಳಿಸಬೇಕು. ಅಧಿಕಾರಿಗಳು, ಶಾಸಕರು, ಸಂಸದರು ಗುತ್ತಿಗೆದಾರರನ್ನು ಕರೆಸಿ ಪೌರಕಾರ್ಮಿಕರ ಬೀದಿಯಲ್ಲಿ ಉಳಿದಿರುವ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
– ಸಿದ್ದಲಿಂಗೇಗೌಡ,ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…