ಓದುಗರ ಪತ್ರ
ಮೈಸೂರಿನಿಂದ ಎಚ್.ಡಿ. ಕೋಟೆಗೆ ತೆರಳುವ ಮಾನಂದವಾಡಿ ಮುಖ್ಯ ರಸ್ತೆಯಲ್ಲಿ ಸಿಗುವ ಹೈರಿಗೆ ಗ್ರಾಮವು ಗ್ರಾಮ ಪಂಚಾಯಿತಿ ಕೇಂದ್ರವಾಗಿದೆ. ಆದರೆ ನೀರಾವರಿ ಇಲಾಖೆಯಿಂದ ಗ್ರಾಮದ ಪೌರ ಕಾರ್ಮಿಕರ ಬೀದಿಗೆ ಸುಮಾರು ೨೮ ಲಕ್ಷ ರೂ.ವೆಚ್ಚದಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಲು ಹಾಗೂ ಸಿಸಿ ರಸ್ತೆ ವ್ಯವಸ್ಥೆ ನಿರ್ಮಾಣಕ್ಕೆ ಕ್ರಿಯಾಯೋಜನೆ ಮಾಡಲಾಗಿತ್ತು, ಆದರೆ ಗುತ್ತಿಗೆದಾರರು ಚರಂಡಿ ಕಾಮಗಾರಿ ಹಾಗೂ ಸಿಸಿ ರಸ್ತೆ ಕಾಮಗಾರಿಯನ್ನು ಅರ್ಧಂಬರ್ಧ ಮಾಡಿ ಬಿಲ್ ಮಾಡಿಸಿಕೊಂಡು ಅರ್ಧಕ್ಕೆ ಕೈ ಬಿಟ್ಟಿದ್ದಾರೆ.
ಈ ವಿಚಾರಕ್ಕೆ ಸಂಬಂಧಪಟ್ಟ ವಾರ್ಡ್ನ ಸದಸ್ಯರು, ಸಂಬಂಧಪಟ್ಟ ಇಲಾಖೆಗೆ ಮನವಿ ಪತ್ರ ನೀಡಿದರೂ ಈ ಬಗ್ಗೆ ಕ್ರಮಕೈಗೊಂಡಿಲ್ಲ. ಹೀಗಾಗಿ ಪೌರ ಕಾರ್ಮಿಕರ ಬೀದಿಯಲ್ಲಿ ನಿರ್ಮಿಸಿರುವ ಚರಂಡಿ ಭೂಮಿಯಿಂದ ಎರಡು ಅಡಿ ಎತ್ತರದಲ್ಲಿದೆ. ಈ ಬೀದಿಯಲ್ಲಿ ಸಣ್ಣ ಮಕ್ಕಳು ಮನೆಯಿಂದ ಬೀದಿಗೆ ಬರಬೇಕಾದರೆ ಬಹಳ ಹರಸಾಹಸ ಪಡುತ್ತಿದ್ದಾರೆ. ಎಷ್ಟೋ ಮಕ್ಕಳು ಮನೆಯ ಮುಂದೆ ನಿರ್ಮಾಣವಾಗಿರುವ ಚರಂಡಿಗೆ ಬಿದ್ದಿರುವ ಘಟನೆಗಳೂ ನಡೆದಿವೆ.
ಆದ್ದರಿಂದ ಬಾಕಿ ಇರುವ ಕಾಮಗಾರಿಯನ್ನು ತಕ್ಷಣ ಪೂರ್ಣ ಗೊಳಿಸಬೇಕು. ಅಧಿಕಾರಿಗಳು, ಶಾಸಕರು, ಸಂಸದರು ಗುತ್ತಿಗೆದಾರರನ್ನು ಕರೆಸಿ ಪೌರಕಾರ್ಮಿಕರ ಬೀದಿಯಲ್ಲಿ ಉಳಿದಿರುವ ಚರಂಡಿ ಹಾಗೂ ಸಿಸಿ ರಸ್ತೆ ಕಾಮಗಾರಿಯನ್ನು ತಕ್ಷಣ ಪೂರ್ಣಗೊಳಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
– ಸಿದ್ದಲಿಂಗೇಗೌಡ,ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾಲ್ಲೂಕು
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…