ಓದುಗರ ಪತ್ರ
ಮೈಸೂರಿನ ಹೆಬ್ಬಾಳ್ ಬಡಾವಣೆಯ ಸೂರ್ಯಬೇಕರಿ ವೃತ್ತದ ಸಮೀಪದಲ್ಲಿರುವ ಎರಡನೇ ಅಡ್ಡರಸ್ತೆಯಲ್ಲಿ ಅವೈಜ್ಞಾನಿಕವಾಗಿ ಯುಜಿಡಿ ಪೈಪ್ಲೈನ್ಕಾಮಗಾರಿ ನಡೆಸಲಾಗುತ್ತಿದೆ. ಒಂದುಕಡೆ ಪೈಪ್ಲೈನ್ಗಾಗಿ ಆರು-ಏಳು ಅಡಿ ಆಳವಾದ ಗುಂಡಿ ಅಗೆದು ಅದರ ಮಣ್ಣನ್ನು ಬೆಟ್ಟದಂತೆ ಗುಡ್ಡೆ ಮಾಡಿ ರಸ್ತೆಯ ಮೇಲೆ ಹಾಕುತ್ತಿದ್ದು, ಈ ಮಾರ್ಗದಲ್ಲಿ ಸಂಚರಿಸುವವರು ಹರ ಸಾಹಸಮಾಬೇಕಾಗಿದೆ.
ಮತ್ತೊಂದೆಡೆ ಹೊಸದಾಗಿ ಕಾಂಕ್ರಿಟ್ ಸ್ಲ್ಯಾಬ್ ಹಾಕುತ್ತೇವೆಂದು ಮನೆಗಳ ಮುಂದಿನ ಚರಂಡಿಗೆ ಹಾಕಿದ್ದ ಚಪ್ಪಡಿ ಕಲ್ಲುಗಳನ್ನು ಕಿತ್ತೊಗೆದಿದ್ದು, ಹಲವಾರು ದಿನಗಳಿಂದ ಸಾರ್ವಜನಿಕರು ಮನೆಯಿಂದ ಹೊರಗೆ ಹೋಗಲು ಹಾಗೂ ತಮ್ಮ ದ್ವಿಚಕ್ರ ವಾಹನಗಳನ್ನು ಮನೆಯ ಮುಂದೆ ನಿಲ್ಲಿಸಲೂ ಸಾಧ್ಯವಾಗುತ್ತಿಲ್ಲ. ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಯುಜಿಡಿ ಪೈಪ್ ಲೈನ್ ಕಾಮಗಾರಿಯನ್ನು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಹಾಗೂ ಈ ಚರಂಡಿಗೆ ಕೂಡಲೇ ಕಾಂಕ್ರಿಟ್ ಸ್ಲ್ಯಾಬ್ಗಳನ್ನು ಅಳವಡಿಸುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಆರ್. ಯಶಸ್ ಹೆಬ್ಬಾಳ್, ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…