Mysore
23
overcast clouds

Social Media

ಮಂಗಳವಾರ, 28 ಜುಲೈ 2026
Light
Dark

ಓದುಗರ ಪತ್ರ: ಪರೀಕ್ಷಾ ವ್ಯವಸ್ಥೆ ಸಮಗ್ರ ಸುಧಾರಣೆ ಅತ್ಯಗತ್ಯ

ಓದುಗರ ಪತ್ರ

ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ ನೀಟ-ಯುಜಿಯಂತಹ ಪ್ರಮುಖ ಪರೀಕ್ಷೆಗಳಿಗೆ ೩೦ ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗುತ್ತಾರೆ. ಆದರೆ, ಪದೇಪದೇ ಸಂಭವಿಸುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳು ಯುವಜನರ ಭವಿಷ್ಯವನ್ನು ಹಾಗೂ ಶೈಕ್ಷಣಿಕ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ತೀವ್ರವಾಗಿ ಕುಸಿಯುವಂತೆ ಮಾಡಿವೆ.

ತಂತ್ರeನದ ಬಳಕೆಯು ಭದ್ರತೆಯನ್ನು ಹೆಚ್ಚಿಸಬಹುದಾದರೂ, ಕೇವಲ ಡಿಜಿಟಲ್ ಮೂಲಸೌಕರ್ಯದಿಂದಲೇ ಸಂಪೂರ್ಣ ಪರಿಹಾರ ಸಿಗಲಾರದು. ವ್ಯವಸ್ಥೆಯಲ್ಲಿ ಪಾರದರ್ಶಕತೆ, ಕಠಿಣ ಆಡಳಿತಾತ್ಮಕ ಹೊಣೆಗಾರಿಕೆ ಮತ್ತು ತಪ್ಪಿತಸ್ಥರ ವಿರುದ್ಧ ಶಾಸನಾತ್ಮಕ ಕ್ರಮಗಳು ಅತ್ಯಗತ್ಯ. ಲಕ್ಷಾಂತರ ವಿದ್ಯಾರ್ಥಿಗಳ ಕನಸುಗಳನ್ನು ಮತ್ತು ದೇಶದ ಮೆರಿಟ್ ವ್ಯವಸ್ಥೆಯನ್ನು ರಕ್ಷಿಸಲು ಆಮೂಲಾಗ್ರ ಸುಧಾರಣೆ ತರುವುದು ಇಂದಿನ ತುರ್ತು ಅಗತ್ಯವಾಗಿದೆ.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

Tags:
error: Content is protected !!