ಒಂಬತ್ತು ವರ್ಷಗಳ ಹಿಂದೆ ನಡೆಸಲಾಗಿದೆ ಎನ್ನಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿಯ ವರದಿಯನ್ನು ಈಗ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಜಾತಿ ಗಣತಿ ಸರಿಯಾದ ಕ್ರಮದಲ್ಲಿ ನಡೆದಿದ್ದರೆ ಆ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡುವುದು ಸರಿ. ಆದರೆ ಈ ಸಮೀಕ್ಷೆಯು ಹೇಗೆ ನಡೆಯಿತು? ಯಾವಾಗ ನಡೆಯಿತು? ಎಂಬುದೇ ಬಹಳಷ್ಟು ಜನರಿಗೆ ಗೊತ್ತಿಲ್ಲ. ಅಲ್ಲದೆ ಇದು ಸರಿಯಾದ ಕ್ರಮದಲ್ಲಿ ನಡೆದಿಲ್ಲ ಎಂಬ ಆರೋಪಗಳೂ ಕೇಳಿ ಬರುತ್ತಿವೆ. ನನ್ನ ಅನುಭವಕ್ಕೆ ಬಂದಂತೆ ನಮ್ಮ ಮನೆಯಲ್ಲಾಗಲಿ ಅಥವಾ ನಮ್ಮ ಬಡಾವಣೆಯಲ್ಲಾಗಲಿ ಈವರೆಗೂ ಯಾವುದೇ ಅಧಿಕಾರಿ ಬಂದು ಜಾತಿ ಗಣತಿಯನ್ನು ಮಾಡಿಲ್ಲ.
ಇದು ನಮ್ಮ ಬಡಾವಣೆಯಲ್ಲಿ ಮಾತ್ರವಲ್ಲ ಅನೇಕ ನಗರಗಳು, ತಾಲ್ಲೂಕುಗಳು, ಗ್ರಾಮೀಣ ಭಾಗಗಳಲ್ಲಿಯೂ ಜಾತಿ ಸಮೀಕ್ಷೆ ಸರಿಯಾದ ಕ್ರಮದಲ್ಲಿ ನಡೆದಿಲ್ಲ ಎಂಬುದಿದೆ. ಹಾಗಿದ್ದರೆ ಜಾತಿ ಗಣತಿಯನ್ನು ಮಾಡಿರುವುದಾದರೂ ಎಲ್ಲಿ? ಅಧಿಕಾರಿಗಳು ಎಲ್ಲೋ ಕುಳಿತು ತಮ್ಮಿಚ್ಛೆಗೆ ಅನುಸಾರ ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದರೆ ಅದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ಮೊದಲು ಸರಿಯಾದ ಕ್ರಮದಲ್ಲಿ ಜಾತಿ ಗಣತಿಯನ್ನು ನಡೆಸಿ ನಂತರ ವರದಿಯನ್ನು ಬಿಡುಗಡೆ ಮಾಡಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಕಾಫಿ ತೋಟದಲ್ಲಿ ಕಾರ್ಮಿಕ ಮಹಿಳೆಯನ್ನು ಕಾಡಾನೆ ಬಲಿ ಪಡೆದಿದೆ. ಚಿಕ್ಕಮಗಳೂರು ತಾಲ್ಲೂಕಿನ…
ಮೈಸೂರು: ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದುದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನ ನಡೆಸಿದ ಆರೋಪ…
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್ಗಳು ಇವೆ. ಈ…