ಒಂಬತ್ತು ವರ್ಷಗಳ ಹಿಂದೆ ನಡೆಸಲಾಗಿದೆ ಎನ್ನಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿಯ ವರದಿಯನ್ನು ಈಗ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಜಾತಿ ಗಣತಿ ಸರಿಯಾದ ಕ್ರಮದಲ್ಲಿ ನಡೆದಿದ್ದರೆ ಆ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡುವುದು ಸರಿ. ಆದರೆ ಈ ಸಮೀಕ್ಷೆಯು ಹೇಗೆ ನಡೆಯಿತು? ಯಾವಾಗ ನಡೆಯಿತು? ಎಂಬುದೇ ಬಹಳಷ್ಟು ಜನರಿಗೆ ಗೊತ್ತಿಲ್ಲ. ಅಲ್ಲದೆ ಇದು ಸರಿಯಾದ ಕ್ರಮದಲ್ಲಿ ನಡೆದಿಲ್ಲ ಎಂಬ ಆರೋಪಗಳೂ ಕೇಳಿ ಬರುತ್ತಿವೆ. ನನ್ನ ಅನುಭವಕ್ಕೆ ಬಂದಂತೆ ನಮ್ಮ ಮನೆಯಲ್ಲಾಗಲಿ ಅಥವಾ ನಮ್ಮ ಬಡಾವಣೆಯಲ್ಲಾಗಲಿ ಈವರೆಗೂ ಯಾವುದೇ ಅಧಿಕಾರಿ ಬಂದು ಜಾತಿ ಗಣತಿಯನ್ನು ಮಾಡಿಲ್ಲ.
ಇದು ನಮ್ಮ ಬಡಾವಣೆಯಲ್ಲಿ ಮಾತ್ರವಲ್ಲ ಅನೇಕ ನಗರಗಳು, ತಾಲ್ಲೂಕುಗಳು, ಗ್ರಾಮೀಣ ಭಾಗಗಳಲ್ಲಿಯೂ ಜಾತಿ ಸಮೀಕ್ಷೆ ಸರಿಯಾದ ಕ್ರಮದಲ್ಲಿ ನಡೆದಿಲ್ಲ ಎಂಬುದಿದೆ. ಹಾಗಿದ್ದರೆ ಜಾತಿ ಗಣತಿಯನ್ನು ಮಾಡಿರುವುದಾದರೂ ಎಲ್ಲಿ? ಅಧಿಕಾರಿಗಳು ಎಲ್ಲೋ ಕುಳಿತು ತಮ್ಮಿಚ್ಛೆಗೆ ಅನುಸಾರ ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದರೆ ಅದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ಮೊದಲು ಸರಿಯಾದ ಕ್ರಮದಲ್ಲಿ ಜಾತಿ ಗಣತಿಯನ್ನು ನಡೆಸಿ ನಂತರ ವರದಿಯನ್ನು ಬಿಡುಗಡೆ ಮಾಡಲಿ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್ಸ್ಟೆಬಲ್ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು…
ವಾಷಿಂಗ್ಟನ್ : ಇರಾನ್ ಅಣ್ವಸ್ತ್ರ ಹೊಂದಲು ಬ್ರಿಟನ್ ರಾಜ ಮೂರನೇ ಚಾರ್ಲ್ಸ್ ಬಯಸುವುದಿಲ್ಲ ಎಂದು ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ…
ಚಾಮರಾಜನಗರ : ಮದುವೆ ಮನೆಯಲ್ಲಿ ಸಂಭ್ರಮ ಮನೆ ಮಾಡಬೇಕಿದ್ದ ಹೊತ್ತಲ್ಲಿ ಚಿನ್ನಾಭರಣದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ಹೋಗಿ, ಚಾಕು…
ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…
1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…