Andolana originals

ಓದುಗರ ಪತ್ರ: ಸರಿಯಾದ ಕ್ರಮದಲ್ಲಿ ಜಾತಿ ಗಣತಿ ನಡೆಯಲಿ

ಒಂಬತ್ತು ವರ್ಷಗಳ ಹಿಂದೆ ನಡೆಸಲಾಗಿದೆ ಎನ್ನಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿಯ ವರದಿಯನ್ನು ಈಗ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಜಾತಿ ಗಣತಿ ಸರಿಯಾದ ಕ್ರಮದಲ್ಲಿ ನಡೆದಿದ್ದರೆ ಆ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡುವುದು ಸರಿ. ಆದರೆ ಈ ಸಮೀಕ್ಷೆಯು ಹೇಗೆ ನಡೆಯಿತು? ಯಾವಾಗ ನಡೆಯಿತು? ಎಂಬುದೇ ಬಹಳಷ್ಟು ಜನರಿಗೆ ಗೊತ್ತಿಲ್ಲ. ಅಲ್ಲದೆ ಇದು ಸರಿಯಾದ ಕ್ರಮದಲ್ಲಿ ನಡೆದಿಲ್ಲ ಎಂಬ ಆರೋಪಗಳೂ ಕೇಳಿ ಬರುತ್ತಿವೆ. ನನ್ನ ಅನುಭವಕ್ಕೆ ಬಂದಂತೆ ನಮ್ಮ ಮನೆಯಲ್ಲಾಗಲಿ ಅಥವಾ ನಮ್ಮ ಬಡಾವಣೆಯಲ್ಲಾಗಲಿ ಈವರೆಗೂ ಯಾವುದೇ ಅಧಿಕಾರಿ ಬಂದು ಜಾತಿ ಗಣತಿಯನ್ನು ಮಾಡಿಲ್ಲ.

ಇದು ನಮ್ಮ ಬಡಾವಣೆಯಲ್ಲಿ ಮಾತ್ರವಲ್ಲ ಅನೇಕ ನಗರಗಳು, ತಾಲ್ಲೂಕುಗಳು, ಗ್ರಾಮೀಣ ಭಾಗಗಳಲ್ಲಿಯೂ ಜಾತಿ ಸಮೀಕ್ಷೆ ಸರಿಯಾದ ಕ್ರಮದಲ್ಲಿ ನಡೆದಿಲ್ಲ ಎಂಬುದಿದೆ. ಹಾಗಿದ್ದರೆ ಜಾತಿ ಗಣತಿಯನ್ನು ಮಾಡಿರುವುದಾದರೂ ಎಲ್ಲಿ? ಅಧಿಕಾರಿಗಳು ಎಲ್ಲೋ ಕುಳಿತು ತಮ್ಮಿಚ್ಛೆಗೆ ಅನುಸಾರ ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದರೆ ಅದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ಮೊದಲು ಸರಿಯಾದ ಕ್ರಮದಲ್ಲಿ ಜಾತಿ ಗಣತಿಯನ್ನು ನಡೆಸಿ ನಂತರ ವರದಿಯನ್ನು ಬಿಡುಗಡೆ ಮಾಡಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

andolana

Recent Posts

ಶಿವಸ್ವಾಮಿಯವರೊಳಗಿನ ಕನ್ನಡದ ಮೇಷ್ಟ್ರು ನಿವೃತ್ತರಾಗುವುದಿಲ್ಲ

ಸಿ.ಎಂ.ನರಸಿಂಹಮೂರ್ತಿ ಪಾಠ ಪ್ರವಚನಗಳ ಜೊತೆ ವಿದ್ಯಾರ್ಥಿಗಳ ನೋವು ನಲಿವುಗಳಿಗೂ ಸ್ಪಂದಿಸುತ್ತಿದ್ದ ಈ ಗುರುಗಳ ಗುಣ ದೊಡ್ಡದು ಶಿವಸ್ವಾಮಿ ಎಂಬ ಕನ್ನಡದ…

2 hours ago

ಸಸ್ಯಾಹಾರಿಗಳ ದುಃಸ್ವಪ್ನ ಮಕಾವ್ ಮತ್ತು ಹಾಂಗ್‌ಕಾಂಗ್…

ಸಿರಿ ಮೈಸೂರು ಮಾಂಸಾಹಾರಿಗಳಿಗೆ ಮಾತ್ರ ಇಲ್ಲಿ ಸಿಗುವಷ್ಟು ವೈವಿಧ್ಯದ ಆಹಾರಗಳು ಇನ್ನೆಲ್ಲೂ ಸಿಗಲಾರವು. ನೀವೂ ಮಾಂಸಾಹಾರಿ ಆಗಿದ್ದರೆ ಹಾಂಗ್‌ಕಾಂಗ್‌ಗೆ ಬಂದಾಗ…

2 hours ago

ವಿಶ್ವ ಸಂಗೀತ ದಿನದಂದು ರಮ್ಮನಹಳ್ಳಿಯ ಜನಪದ ಗಾಯಕ ಅಂಕಪ್ಪನವರ ಕುರಿತು…

ಡಾ.ಮೈಸೂರು ಉಮೇಶ್ ಹತ್ತಾರು ಜನಪದ ಕಾವ್ಯ, ನೂರಾರು ತತ್ವಪದ ಮತ್ತು ಭಜನೆ ಪದಗಳನ್ನು ಹಾಡುವ ಅಂಕಪ್ಪ ಈ ನೆಲದ ಸಂಪತ್ತು …

2 hours ago

ಕರ್ತೋಜಿಯಲ್ಲಿ ಸುಸಜ್ಜಿತ ತಡೆಗೋಡೆ ನಿರ್ಮಾಣ

ನವೀನ್ ಡಿಸೋಜ ಮಡಿಕೇರಿ-ಮಂಗಳೂರು ಹೆದ್ದಾರಿಯ ಈ ಪ್ರದೇಶ ಈಗ ಸುರಕ್ಷಿತ ೧೧ ಸೂಕ್ಷ್ಮ ಪ್ರದೇಶಗಳಲ್ಲಿ ತಡೆಗೋಡೆ ಕಾಮಗಾರಿ ಪ್ರಗತಿಯಲ್ಲಿ  ಮಡಿಕೇರಿ:…

2 hours ago

ಸಂಪುಟ ವಿಸ್ತರಣೆ: ಮೈಸೂರು ಭಾಗದ ‘ಕೈ’ಶಾಸಕರ ಕಸರತ್ತು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯಸಭೆ, ರಾಜ್ಯ ವಿಧಾನ ಪರಿಷತ್ ಚುನಾವಣೆ ಮುಗಿಯುತ್ತಿದ್ದಂತೆ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಚುರುಕುಗೊಂಡಿದ್ದು, ಮೈಸೂರು ಭಾಗದ…

2 hours ago

‘ಪ್ರಾಮಾಣಿಕ ಸೇವೆ; ಪಾರದರ್ಶಕ ಆಡಳಿತಕ್ಕೆ ಬದ್ಧʼ

ಸಂದರ್ಶನ: ಶ್ರೀಧರ್ ಆರ್ ಭಟ್ ನಗರಾಭಿವೃದ್ಧಿ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ವಿಶ್ವಾಸ  ಮೈಸೂರು: ನಗರಾಭಿವೃದ್ಧಿ ಇಲಾಖೆಯಲ್ಲಿ ಹಲವಾರು ಸವಾಲುಗಳಿವೆ. ಸಚಿವನಾಗಿ…

2 hours ago