Andolana originals

ಓದುಗರ ಪತ್ರ: ಸರಿಯಾದ ಕ್ರಮದಲ್ಲಿ ಜಾತಿ ಗಣತಿ ನಡೆಯಲಿ

ಒಂಬತ್ತು ವರ್ಷಗಳ ಹಿಂದೆ ನಡೆಸಲಾಗಿದೆ ಎನ್ನಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿಯ ವರದಿಯನ್ನು ಈಗ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.

ಜಾತಿ ಗಣತಿ ಸರಿಯಾದ ಕ್ರಮದಲ್ಲಿ ನಡೆದಿದ್ದರೆ ಆ ವರದಿಯನ್ನು ಸರ್ಕಾರ ಅಧಿಕೃತವಾಗಿ ಬಿಡುಗಡೆ ಮಾಡುವುದು ಸರಿ. ಆದರೆ ಈ ಸಮೀಕ್ಷೆಯು ಹೇಗೆ ನಡೆಯಿತು? ಯಾವಾಗ ನಡೆಯಿತು? ಎಂಬುದೇ ಬಹಳಷ್ಟು ಜನರಿಗೆ ಗೊತ್ತಿಲ್ಲ. ಅಲ್ಲದೆ ಇದು ಸರಿಯಾದ ಕ್ರಮದಲ್ಲಿ ನಡೆದಿಲ್ಲ ಎಂಬ ಆರೋಪಗಳೂ ಕೇಳಿ ಬರುತ್ತಿವೆ. ನನ್ನ ಅನುಭವಕ್ಕೆ ಬಂದಂತೆ ನಮ್ಮ ಮನೆಯಲ್ಲಾಗಲಿ ಅಥವಾ ನಮ್ಮ ಬಡಾವಣೆಯಲ್ಲಾಗಲಿ ಈವರೆಗೂ ಯಾವುದೇ ಅಧಿಕಾರಿ ಬಂದು ಜಾತಿ ಗಣತಿಯನ್ನು ಮಾಡಿಲ್ಲ.

ಇದು ನಮ್ಮ ಬಡಾವಣೆಯಲ್ಲಿ ಮಾತ್ರವಲ್ಲ ಅನೇಕ ನಗರಗಳು, ತಾಲ್ಲೂಕುಗಳು, ಗ್ರಾಮೀಣ ಭಾಗಗಳಲ್ಲಿಯೂ ಜಾತಿ ಸಮೀಕ್ಷೆ ಸರಿಯಾದ ಕ್ರಮದಲ್ಲಿ ನಡೆದಿಲ್ಲ ಎಂಬುದಿದೆ. ಹಾಗಿದ್ದರೆ ಜಾತಿ ಗಣತಿಯನ್ನು ಮಾಡಿರುವುದಾದರೂ ಎಲ್ಲಿ? ಅಧಿಕಾರಿಗಳು ಎಲ್ಲೋ ಕುಳಿತು ತಮ್ಮಿಚ್ಛೆಗೆ ಅನುಸಾರ ಜಾತಿ ಗಣತಿಯ ವರದಿಯನ್ನು ಸಿದ್ಧಪಡಿಸಿದರೆ ಅದನ್ನು ಯಾರೂ ಒಪ್ಪಲು ಸಾಧ್ಯವಿಲ್ಲ. ಆದ್ದರಿಂದ ಸರ್ಕಾರ ಮೊದಲು ಸರಿಯಾದ ಕ್ರಮದಲ್ಲಿ ಜಾತಿ ಗಣತಿಯನ್ನು ನಡೆಸಿ ನಂತರ ವರದಿಯನ್ನು ಬಿಡುಗಡೆ ಮಾಡಲಿ.

-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.

 

andolana

Recent Posts

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

42 mins ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

2 hours ago

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

5 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

5 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

5 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

5 hours ago