ಹಿರಿಯ ನಟಿ, ನಿರ್ಮಾಪಕಿ, ಮಾಜಿ ಸಚಿವೆ ಡಾ.ಜಯಮಾಲ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ೨ನೇ ಬಾರಿಗೆ ಆಯ್ಕೆಯಾಗಿರುವುದು ಸ್ವಾಗತಾರ್ಹ. ಕನ್ನಡ ಚಲನ ಚಿತ್ರ ರಂಗದಲ್ಲಿ ೫ ದಶಕಗಳಿಗೂ ಹೆಚ್ಚು ಕಾಲದಿಂದ ತೊಡಗಿಸಿಕೊಂಡಿರುವ ಡಾ.ಜಯಮಾಲ ಅವರು, ಡಾ.ರಾಜ್ ಕುಮಾರ್, ಡಾ.ವಿಷ್ಣುವರ್ಧನ್, ಡಾ.ಅಂಬರೀಶ್, ಅನಂತನಾಗ್, ದಿವಂಗತ ಶಂಕರ್ ನಾಗ್ ಸೇರಿದಂತೆ ಹಲವಾರು ಖ್ಯಾತ ನಾಯಕ ನಟರಿಗೆ ನಾಯಕಿಯಾಗಿ ನಟಿಸಿ, ಕನ್ನಡ ಚಿತ್ರರಂಗದಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದಾರೆ.ಅದರಲ್ಲೂ ವಿಶೇಷವಾಗಿ ಡಾ.ರಾಜಕುಮಾರ್ ಅವರಿಗೆ ನಾಯಕಿಯಾಗಿ ಪ್ರೇಮದ ಕಾಣಿಕೆ, ತ್ರಿಮೂರ್ತಿ, ಶಂಕರ್ ಗುರು, ಬಬ್ರುವಾಹನ ( ಗೌರವ ಪಾತ್ರ) ಮುಂತಾದ ಚಿತ್ರಗಳಲ್ಲಿ ಕಾಣಿಸಿಕೊಂಡರು.
ರಾಜಕೀಯದಲ್ಲಿ ಕೂಡ ಸಕ್ರಿಯರಾದ ಅವರು ರಾಜ್ಯ ವಿಧಾನ ಪರಿಷತ್ತಿಗೆ ನಾಮಕರಣಗೊಂಡರು. ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ (೨೦೧೩) ಅವರ ಸಂಪುಟದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾಗಿಯೂ ಕೆಲಸ ಮಾಡಿದರು. ರಾಷ್ಟ್ರ ಪ್ರಶಸ್ತಿಪುರಸ್ಕೃತ ‘ ತಾಯಿ ಸಾಹೇಬ’ಚಿತ್ರವನ್ನು ರಾಷ್ಟ್ರಪ್ರಶಸ್ತಿ ವಿಜೇತ ಗಿರೀಶ್ ಕಾಸರವಳ್ಳಿಯವರ ನಿರ್ದೇಶನದಲ್ಲಿ ತಾವೇ ನಿರ್ಮಿಸಿ, ನಾಯಕಿಯಾಗಿ ನಟಿಸಿದರು. ೨೦೦೮ ರಲ್ಲಿ ಪ್ರಥಮ ಬಾರಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ ಆಯ್ಕೆಗೊಂಡು ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ ಅವರು ಈಗ ೨ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಗೊಂಡಿದ್ದಾರೆ. ಡಾ.ಜಯಮಾಲ ಅವರು ಮೈಸೂರಿನ ‘ ಶಕ್ತಿಧಾಮ’ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿ ಕೊಂಡಿದ್ದಾರೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.
-ಕೆ.ವಿ.ವಾಸು, ವಿವೇಕಾನಂದನಗರ, ಮೈಸೂರು
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾದ ಇಂದು ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದಾಳೆ.…
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ದಿಲ್ಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ ಕೇಂದ್ರ ಸರ್ಕಾರದ ಕುಮ್ಮಕ್ಕು ಹಾಗೂ ಪೊಲೀಸರ…
ಕಳೆದ ೨೫ ವರ್ಷಗಳಿಂದ ರಾಜ್ಯದಲ್ಲಿ ೧೦ ಸಾವಿರ ಗ್ರಂಥಪಾಲಕ ಹುದ್ದೆಗಳನ್ನು ಭರ್ತಿ ಮಾಡದಿರುವುದು ಸರ್ಕಾರದ ಅಕ್ಷಮ್ಯ ನಿರ್ಲಕ್ಷ್ಯ. ೧,೨೦೦ ಸರ್ಕಾರಿ…
ಮೈಸೂರಿನ ಕುವೆಂಪು ನಗರದ ಎಂ ಬ್ಲಾಕ್ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರವು, ಕಳೆದ ಮೂರು ತಿಂಗಳಿಂದ ಮುಚ್ಚಿದೆ. ಇದಕ್ಕೆ ಕಾರಣ ತಿಳಿದಿಲ್ಲ.…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ‘ತಿಣಿಕಿದನು -ಣಿರಾಯ ರಾಮಾಯಣದ ಕವಿಗಳ ಭಾರದಲಿ ತಿಂ ತಿಣೀಯ ರಘುವರ ಚರಿತೆಯಲಿ ಕಾಲಿಡಲು ತೆರಪಿಲ್ಲ’ ಎಂದು…
ಪುನೀತ್ ಜಿಲ್ಲೆಯಲ್ಲಿ ಕ್ಷೀಣಿಸಿದ ಮಳೆಯಿಂದ ಬೇಡಿಕೆ ಕುಸಿತ; ಕುಲಕಸುಬಿಗೆ ಹೊಡೆತ ಮಡಿಕೇರಿ: ಜಿಲ್ಲೆಯಲ್ಲಿ ಧಾರಾಕಾರ ಮಳೆಯ ವಾತಾವರಣ ಇಲ್ಲದ ಕಾರಣ…