ಓದುಗರ ಪತ್ರ
ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜ್ಯದ ಅತಿಹೆಚ್ಚು ದೀರ್ಘಾವಧಿಯ ಮುಖ್ಯಮಂತ್ರಿ ಎಂಬ ದಾಖಲೆ ಬರೆದಿದ್ದಾರೆ. ಇದಕ್ಕೆ ಸಂಬಂಧಿಸಿದ ಹಾಗೆ ರಾಜ್ಯದ ಅನೇಕ ಭಾಗಗಳಲ್ಲಿ ಸಂಭ್ರಮಾಚರಣೆ ಮಾಡಲಾಗಿದೆ. ಹಿಂದುಳಿದ ವರ್ಗಗಳ ಆರಾಧ್ಯ ದೈವ ಹಾಗೂ ಸಾಮಾಜಿಕ ಪರಿವರ್ತನೆಯ ಹರಿಕಾರ ಎನಿಸಿದ್ದ ದಿ.ದೇವರಾಜ ಅರಸುರವರ ದಾಖಲೆಯನ್ನು ಮುರಿದಿರುವ ಸಿದ್ದರಾಮಯ್ಯನವರು, ಕಾಂಗ್ರೆಸ್ ಪಕ್ಷದ ಅತ್ಯಂತ ಪ್ರಭಾವಶಾಲಿ ನಾಯಕನಾಗಿ ಹೊರಹೊಮ್ಮಿದ್ದಾರೆ. ೧೬ ಬಾರಿ ರಾಜ್ಯದ ಆಯವ್ಯಯ (ಬಜೆಟ್)ಗಳನ್ನು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ (೧೯೮೩) ಕನ್ನಡ ಕಾವಲು ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡ ಸಿದ್ದರಾಮಯ್ಯ ಆ ನಂತರ ರಾಜ್ಯದ ರಾಜಕಾರಣದಲ್ಲಿ ಹಲವಾರು ಮಹತ್ವದ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಎರಡನೇ ಬಾರಿಗೆ ಮುಖ್ಯಮಂತ್ರಿಯಾದ ಅವರು, ರಾಜ್ಯದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರ ಹಿಂದುಳಿದ ವರ್ಗಗಳ ಅಭಿವೃದ್ಧಿಗಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿರುವುದಲ್ಲದೇ ತಮ್ಮ ಅಧಿಕಾರದ ಎರಡನೇ ಅವಧಿಯಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ಹಲವಾರು ಸಂಘರ್ಷಗಳನ್ನು ಎದುರಿಸುತ್ತಲೇ ರಾಜಕೀಯ ಪರಿಪಕ್ವತೆಯನ್ನು ಮೈಗೂಡಿಸಿಕೊಂಡಿದ್ದು, ೫ ವರ್ಷಗಳ ಅಧಿಕಾರವನ್ನು ಪೂರೈಸುವ ಆಶಯ ಹೊಂದಿದ್ದಾರೆ. ತಮ್ಮ ವಿರುದ್ಧ ಸಾಕಷ್ಟು ಅಪಸ್ವರಗಳು, ಟೀಕೆ ಟಿಪ್ಪಣಿಗಳು ಕೇಳಿ ಬರುತ್ತಿದ್ದರೂ ಯಾವುದಕ್ಕೂ ತಲೆ ಕಡೆಸಿಕೊಳ್ಳದೇ ತಮ್ಮ ಕಾಯಕದಲ್ಲಿ ಮುಂದುವರೆದಿದ್ದಾರೆ. ದಾಖಲೆ ರಾಮಯ್ಯನವರಿಗೆ ಅಭಿನಂದನೆಗಳು.
-ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಸಾರ್ಥಕ ಬದುಕಿನ ಸಾಧಕ! ಗಹನ ಆರ್ಥಿಕ ಚಿಂತನೆಗಳನು ಎಳೆಎಳೆಯಾಗಿ ಬಿಡಿಸಿ ನೀಡಿದ ನಾಡ ಅಪ್ಪಟ ಆರ್ಥಿಕ ಚಿಂತಕ! ಶಿಷ್ಯರ ಮನದ…
ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ…
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು…
ಶಿವಾಜಿ ಗಣೇಶನ್ ಅವರ ವಾರದ ಅಂಕಣ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ದೇಶದಲ್ಲಿ ದಿಢೀರನೆ ಹುಟ್ಟಿಕೊಂಡ ಕಾಕ್ರೋಚ್ ಜನತಾ…
ಬಿ.ಎಸ್.ವಿನಯ್ ಇಲ್ಲಿಯವರೆಗೆ ನಮ್ಮಂತಹ ಅಂಕಲ್ -ಆಂಟಿಗಳು ಜೆನ್ ಝೀಗಳ ಬಗ್ಗೆ ಒಳ್ಳೆಯ ಮಾತಾಡಿದ್ದಕ್ಕಿಂತ ಮೂಗು ಮುರಿದದ್ದೇ ಹೆಚ್ಚು. ಈ ಹುಡುಗರಿಗೆ…
ಸ್ವಾಮಿ ಪೊನ್ನಾಚಿ ನಾನು ಸಾಹಿತ್ಯವನ್ನು ಗಂಭೀರವಾಗಿ ಓದಿಕೊಳ್ಳುವ ಕಾಲಕ್ಕೆ ಹೆಚ್ಚು ಕಡಿಮೆ ಚಳವಳಿಗಳ ಕಾವು ನಿಂತೇ ಹೋಗಿತ್ತು. ಜೋರು ಗಾಳಿ…