Andolana originals

ಓದುಗರ ಪತ್ರ| ʼಆಂದೋಲನʼ ತಂಡಕ್ಕೆ ಅಭಿನಂದನೆಗಳು

‘ಆಂದೋಲನ’ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರಶ್ಮಿ ಕೋಟಿ ಸ್ವತಃ ಪ್ರಕೃತಿ ವಿಕೋಪ ಸಂಭವಿಸಿರುವ ವಯನಾಡಿಗೆ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಸಂಪೂರ್ಣ ಚಿತ್ರಣವನ್ನು ವರದಿಯ ರೂಪದಲ್ಲಿ ‘ಆಂದೋಲನ’ದ ಓದುಗರ ಮುಂದಿಟ್ಟಿದ್ದಾರೆ. ‘ಒಂದು ಶಿಬಿರ, ಯಾತನೆ ಸಾವಿರ’ ಎನುವ ಶೀರ್ಷಿಕೆಯೇ ಹೇಳುವಂತೆ ಅಲ್ಲಿನ ಜನರ ಗೋಳು ಮನಕಲಕುವಂತಿದೆ. ಆ ಶಿಬಿರಗಳಲ್ಲಿ ಎದುರುಗೊಂಡವರ ದುಃಖವನ್ನು ಕಂಡು, ಮರುಗಿ ಅದಕ್ಕೆ ಅಕ್ಷರರೂಪ ನೀಡಿ ಮನಕಲಕುವಂತೆ ವರದಿ ಮಾಡಿದ್ದಾರೆ.

‘ಆಂದೋಲನ’ ಪತ್ರಿಕೆಯ ತಂಡ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದಾಗ ಅಲ್ಲಿನ ಜನ ‘ಇವರೇನಾದರೂ ನಮ್ಮ ಪ್ರೀತಿ ಪಾತ್ರರು ಸುರಕ್ಷಿತವಾಗಿರುವ ಸಂದೇಶ ತಂದಿದ್ದಾರೆಯೇ? ನಮ್ಮವರು ಜೀವಂತವಾಗಿರುವ ಮಾಹಿತಿ ನೀಡಲಿದ್ದಾರೆಯೇ?’ ಎಂದು ಎದುರು ನೋಡುವ ಸನ್ನಿವೇಶವನ್ನು ಸ್ವತಃ ಅನುಭವಿಸಿ ಅದನ್ನು ಓದುಗರ ಕಣ್ಣಿಗೆ ಕಟ್ಟುವಂತೆ ವರದಿ ಮಾಡಿದ್ದಾರೆ. ಒಬ್ಬ ಮಹಿಳಾ ಪತ್ರಕರ್ತರಾಗಿ ಭೂ ಕುಸಿತ ಹಾಗೂ ಪ್ರವಾಹದಂತಹ ಭೀಕರ ದುರಂತದ ಸ್ಥಳಕೇ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಮಾಡಿರುವ ರಶ್ಮಿ ಕೋಟಿ ಅವರ ತಂಡವನ್ನು ಅಭಿನಂದಿಸುತ್ತೇನೆ. ಈ ಹಿಂದೆ ಇಂತಹ ಅವಘಡಗಳು, ವಿಪತ್ತುಗಳು ಸಂಭವಿಸಿದಾಗ ನೊಂದವರ ಪರವಾಗಿ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿಯವರು ದೇಣಿಗೆ ಸಂಗ್ರಹಿಸಿ ಸಹಾಯಹಸ್ತ ಚಾಚಿದ ಉದಾಹರಣೆಗಳು ಬಹಳಷ್ಟಿವೆ. ‘ಆಂದೋಲನ’ದ ಈ ಕಾಳಜಿಯನ್ನು ಅಭಿನಂದಿಸಲೇಬೇಕು.

-ಜಿ.ಕೆ.ಕುಲಕರ್ಣಿ, ಸರಸ್ವತಿಪುರಂ, ಮೈಸೂರು

ಆಂದೋಲನ ಡೆಸ್ಕ್

Recent Posts

ಸಿಲಿಂಡರ್‌ ಸ್ಫೋಟ : ಮೈಸೂರಿಗೆ NIA ತಂಡ ಭೇಟಿ, ಹಲವು ಆಯಾಮಗಳಿಂದ ಪರಿಶೀಲನೆ

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ…

51 mins ago

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ

ಓದುಗರ ಪತ್ರ: ಜಾತಿ ಅಳಿಯಲಿ ಜೀವ ಉಳಿಯಲಿ ಈ ಅಮಾನವೀಯ ಕ್ರೂರ ಕೃತ್ಯಕ್ಕೆ ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುತ್ತಿದೆ…

3 hours ago

ಓದುಗರ ಪತ್ರ: ರಸ್ತೆ ಕಾಮಗಾರಿ ಪೂರ್ಣಗೊಳಿಸಿ

ಚಾಮರಾಜನಗರದ ಗುಂಡ್ಲುಪೇಟೆ ಪಟ್ಟಣದ ವಾರ್ಡ್ ೨೩ ರ ಹೊಸೂರು ಜನನಿಬಿಡ ಪ್ರದೇಶವಾಗಿದ್ದು, ಅಕ್ಕ ಪಕ್ಕದಲ್ಲಿ ಶಾಲೆ ಇದ್ದು, ಪೋಷಕರು ತಮ್ಮ…

3 hours ago

ಓದುಗರ ಪತ್ರ: ಬಿಸಿಎಂ ವಿದ್ಯಾರ್ಥಿನಿಲಯಕ್ಕೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರಿನ ಬೋಗಾದಿ ರಸ್ತೆಯಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ (ಬಿಸಿಡಬ್ಲ್ಯೂಡಿ ೨೨೫೦)ಲ್ಲಿ ಶೌಚಾಲಯವು ಅಶುಚಿತ್ವದಿಂದ ಕೂಡಿದೆ. ಶೌಚಾಲಯ ಸ್ವಚ್ಛಗೊಳಿಸುವಂತೆ ವಾರ್ಡನ್…

3 hours ago

ಅರಮನೆ ಮುಂಭಾಗ ಸಿಲಿಂಡರ್ ಸ್ಪೋಟ : ಮೃತ ವ್ಯಕ್ತಿ ಸಲೀಂ ವಿರುದ್ಧ ಎಫ್ಐಆರ್ ; ಗುರುತು ಪತ್ತೆ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿನ್ನೆ(ಡಿ.25) ಸಂಜೆ ಅರಮನೆ ಮುಂಭಾಗ ಬಲೂನ್​ಗೆ ಗ್ಯಾಸ್​ ತುಂಬುವಾಗ ಹೀಲಿಯಂ ಸಿಲಿಂಡರ್​ ಸ್ಫೋಟಗೊಂಡು…

3 hours ago

ಓದುಗರ ಪತ್ರ: ಕಸದ ರಾಶಿ ತೆರವುಗೊಳಿಸಿ

ಮೈಸೂರಿನ ಜಯನಗರದ ಇಸ್ಕಾನ್ ಕೃಷ್ಣ ದೇವಾಲಯ ರಸ್ತೆಯ ಪಕ್ಕದಲ್ಲಿ ತ್ಯಾಜ್ಯ ವಸ್ತುಗಳ ರಾಶಿ ಬಿದ್ದಿದೆ. ಕೆಲವರು ರಸ್ತೆಯಲ್ಲೇ ಮೂತ್ರ ವಿಸರ್ಜನೆ…

4 hours ago