Andolana originals

ಓದುಗರ ಪತ್ರ| ʼಆಂದೋಲನʼ ತಂಡಕ್ಕೆ ಅಭಿನಂದನೆಗಳು

‘ಆಂದೋಲನ’ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾದ ರಶ್ಮಿ ಕೋಟಿ ಸ್ವತಃ ಪ್ರಕೃತಿ ವಿಕೋಪ ಸಂಭವಿಸಿರುವ ವಯನಾಡಿಗೆ ಭೇಟಿ ನೀಡಿ ಅಲ್ಲಿಯ ಪರಿಸ್ಥಿತಿಯನ್ನು ಕಣ್ಣಾರೆ ಕಂಡು ಸಂಪೂರ್ಣ ಚಿತ್ರಣವನ್ನು ವರದಿಯ ರೂಪದಲ್ಲಿ ‘ಆಂದೋಲನ’ದ ಓದುಗರ ಮುಂದಿಟ್ಟಿದ್ದಾರೆ. ‘ಒಂದು ಶಿಬಿರ, ಯಾತನೆ ಸಾವಿರ’ ಎನುವ ಶೀರ್ಷಿಕೆಯೇ ಹೇಳುವಂತೆ ಅಲ್ಲಿನ ಜನರ ಗೋಳು ಮನಕಲಕುವಂತಿದೆ. ಆ ಶಿಬಿರಗಳಲ್ಲಿ ಎದುರುಗೊಂಡವರ ದುಃಖವನ್ನು ಕಂಡು, ಮರುಗಿ ಅದಕ್ಕೆ ಅಕ್ಷರರೂಪ ನೀಡಿ ಮನಕಲಕುವಂತೆ ವರದಿ ಮಾಡಿದ್ದಾರೆ.

‘ಆಂದೋಲನ’ ಪತ್ರಿಕೆಯ ತಂಡ ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿದಾಗ ಅಲ್ಲಿನ ಜನ ‘ಇವರೇನಾದರೂ ನಮ್ಮ ಪ್ರೀತಿ ಪಾತ್ರರು ಸುರಕ್ಷಿತವಾಗಿರುವ ಸಂದೇಶ ತಂದಿದ್ದಾರೆಯೇ? ನಮ್ಮವರು ಜೀವಂತವಾಗಿರುವ ಮಾಹಿತಿ ನೀಡಲಿದ್ದಾರೆಯೇ?’ ಎಂದು ಎದುರು ನೋಡುವ ಸನ್ನಿವೇಶವನ್ನು ಸ್ವತಃ ಅನುಭವಿಸಿ ಅದನ್ನು ಓದುಗರ ಕಣ್ಣಿಗೆ ಕಟ್ಟುವಂತೆ ವರದಿ ಮಾಡಿದ್ದಾರೆ. ಒಬ್ಬ ಮಹಿಳಾ ಪತ್ರಕರ್ತರಾಗಿ ಭೂ ಕುಸಿತ ಹಾಗೂ ಪ್ರವಾಹದಂತಹ ಭೀಕರ ದುರಂತದ ಸ್ಥಳಕೇ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯ ಬಗ್ಗೆ ವರದಿ ಮಾಡಿರುವ ರಶ್ಮಿ ಕೋಟಿ ಅವರ ತಂಡವನ್ನು ಅಭಿನಂದಿಸುತ್ತೇನೆ. ಈ ಹಿಂದೆ ಇಂತಹ ಅವಘಡಗಳು, ವಿಪತ್ತುಗಳು ಸಂಭವಿಸಿದಾಗ ನೊಂದವರ ಪರವಾಗಿ ಪತ್ರಿಕೆಯ ಸಂಸ್ಥಾಪಕ ಸಂಪಾದಕರಾದ ರಾಜಶೇಖರ ಕೋಟಿಯವರು ದೇಣಿಗೆ ಸಂಗ್ರಹಿಸಿ ಸಹಾಯಹಸ್ತ ಚಾಚಿದ ಉದಾಹರಣೆಗಳು ಬಹಳಷ್ಟಿವೆ. ‘ಆಂದೋಲನ’ದ ಈ ಕಾಳಜಿಯನ್ನು ಅಭಿನಂದಿಸಲೇಬೇಕು.

-ಜಿ.ಕೆ.ಕುಲಕರ್ಣಿ, ಸರಸ್ವತಿಪುರಂ, ಮೈಸೂರು

ಆಂದೋಲನ ಡೆಸ್ಕ್

Recent Posts

ಸರ್ಕಾರಿ ಶಾಲಾ ಮಕ್ಕಳಿಗೆ ಕಳಪೆ ಶೂ ವಿತರಣೆ: ರಾಜ್ಯ ಸರ್ಕಾರದ ವಿರುದ್ಧ ಶೇ.40 ಕಮಿಷನ್ ಆರೋಪ ಮಾಡಿದ ಆರ್.‌ಅಶೋಕ್‌

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…

3 hours ago

ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಂಡ ಸರ್ಕಾರ

ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…

4 hours ago

ರಾಜ್ಯದಲ್ಲಿ ಕೈಕೊಟ್ಟ ಮುಂಗಾರು: ಸಂಕಷ್ಟದತ್ತ ಕೃಷಿ ವಲಯ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…

4 hours ago

ಮಳೆ ಕೈಕೊಟ್ಟಿದ್ದಕ್ಕೆ ರಾಜ್ಯದಲ್ಲಿ ತಾಪಮಾನ ಏರಿಕೆ – ಮಳೆಗಾಲದಲ್ಲೇ ಬೇಸಿಗೆಯಂತಹ ಬಿಸಿಲು

ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…

4 hours ago

SIR ನೋಟಿಸ್: ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ

ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…

7 hours ago

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

11 hours ago