ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ ಕ್ಯಾತಮಾರನಹಳ್ಳಿಯಲ್ಲಿ ಹುಲಿಯಮ್ಮನ ಜಾತ್ರೆಯು ಯಾವುದೇ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆಯಲು ಪೊಲೀಸ್ ಸಿಬ್ಬಂದಿ ಶ್ರಮಿಸಿದ್ದು, ಅಭಿನಂದನಾರ್ಹರಾಗಿದ್ದಾರೆ.
ಹತ್ತು ದಿನಗಳ ಕಾಲ ನಡೆದ ಗ್ರಾಮ ದೇವತೆ ಹುಲಿಯಮ್ಮನ ಜಾತ್ರಾ ಮಹೋತ್ಸವದ ವೇಳೆ ಜಾತ್ರೆಗೂ ಮುನ್ನ ಪೊಲೀಸ್ ಅಧಿಕಾರಿಗಳು ವಿವಿಧ ಸಮುದಾಯಗಳ ಮುಖಂಡರ ಜತೆ ಸಮನ್ವಯ ಸಭೆ ನಡೆಸಿ, ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದರು. ಅಲ್ಲದೆ ಜಾತ್ರಾ ಮಹೋತ್ಸವದ ಹತ್ತು ದಿನಗಳ ಕಾಲವೂ ಯಾವುದೇ ಗಲಭೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುವ ಜತೆಗೆ ಸೂಕ್ಷ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡುವ ಮೂಲಕ ಶಾಂತಿಯುತವಾಗಿ ಜಾತ್ರೆ ನಡೆಯಲು ಅನುವು ಮಾಡಿಕೊಟ್ಟರು. ಜಾತ್ರೆ ಸುಗಮವಾಗಿ ನಡೆಯಲು ಹಗಲು-ರಾತ್ರಿ ಶ್ರಮಿಸಿದ ಪೊಲೀಸ್ ಇಲಾಖೆಗೆ ಅಭಿನಂದನೆಗಳು.
-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…