Andolana originals

ಓದುಗರ ಪತ್ರ: ಪೊಲೀಸ್ ಇಲಾಖೆಗೆ ಅಭಿನಂದನೆಗಳು

ಮೈಸೂರಿನಲ್ಲಿ ಇತ್ತೀಚೆಗೆ ನಡೆದ ಕೋಮುಗಲಭೆ ಜನರು ಹಬ್ಬಗಳನ್ನು ಆತಂಕದಲ್ಲೇ ಆಚರಿಸುವಂತೆ ಮಾಡಿತ್ತು. ಇಂತಹ ಆತಂಕದ ಸಂದರ್ಭದಲ್ಲಿಯೂ ಸೂಕ್ಷ್ಮ ಪ್ರದೇಶವಾದ ನಗರದ ಕ್ಯಾತಮಾರನಹಳ್ಳಿಯಲ್ಲಿ ಹುಲಿಯಮ್ಮನ ಜಾತ್ರೆಯು ಯಾವುದೇ ಗೊಂದಲವಿಲ್ಲದೆ ಯಶಸ್ವಿಯಾಗಿ ನಡೆಯಲು ಪೊಲೀಸ್ ಸಿಬ್ಬಂದಿ ಶ್ರಮಿಸಿದ್ದು, ಅಭಿನಂದನಾರ್ಹರಾಗಿದ್ದಾರೆ.

ಹತ್ತು ದಿನಗಳ ಕಾಲ ನಡೆದ ಗ್ರಾಮ ದೇವತೆ ಹುಲಿಯಮ್ಮನ ಜಾತ್ರಾ ಮಹೋತ್ಸವದ ವೇಳೆ ಜಾತ್ರೆಗೂ ಮುನ್ನ ಪೊಲೀಸ್ ಅಧಿಕಾರಿಗಳು ವಿವಿಧ ಸಮುದಾಯಗಳ ಮುಖಂಡರ ಜತೆ ಸಮನ್ವಯ ಸಭೆ ನಡೆಸಿ, ಜಾತ್ರೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದರು. ಅಲ್ಲದೆ ಜಾತ್ರಾ ಮಹೋತ್ಸವದ ಹತ್ತು ದಿನಗಳ ಕಾಲವೂ ಯಾವುದೇ ಗಲಭೆಗಳು ನಡೆಯದಂತೆ ಕಟ್ಟೆಚ್ಚರ ವಹಿಸುವ ಜತೆಗೆ ಸೂಕ್ಷ  ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಬಿಗಿ ಬಂದೋಬಸ್ತ್ ಮಾಡುವ ಮೂಲಕ ಶಾಂತಿಯುತವಾಗಿ ಜಾತ್ರೆ ನಡೆಯಲು ಅನುವು ಮಾಡಿಕೊಟ್ಟರು. ಜಾತ್ರೆ ಸುಗಮವಾಗಿ ನಡೆಯಲು ಹಗಲು-ರಾತ್ರಿ ಶ್ರಮಿಸಿದ ಪೊಲೀಸ್ ಇಲಾಖೆಗೆ ಅಭಿನಂದನೆಗಳು.

-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು.

 

 

 

 

 

ಆಂದೋಲನ ಡೆಸ್ಕ್

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

1 hour ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

5 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

6 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

7 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

7 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

7 hours ago