ಓದುಗರ ಪತ್ರ
ಹನೂರು ತಾಲ್ಲೂಕಿನ ನಾಲ್ರೋಡ್-ಗರಿಕೆಕಂಡಿ ರಸ್ತೆಯನ್ನು ದುರಸ್ತಿಗೊಳಿಸುವ ಬಗ್ಗೆ ಆಂದೋಲನ ದಿನಪತ್ರಿಕೆಯಲ್ಲಿ ಜೂ. 21ರಂದು ವರದಿಯಾಗಿದೆ. ಇದು ಕರ್ನಾಟಕದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಅಂತರ ರಾಜ್ಯ ರಸ್ತೆಯಾಗಿದ್ದು, ಭಾರೀ ವಾಹನಗಳ ಸಂಚಾರದಿಂದ ಹದಗೆಟ್ಟಿತ್ತು.
ಕೊಳ್ಳೇಗಾಲ ಭಾಗದಿಂದ ಸೇಲಂ ಮತ್ತು ಈರೋಡ್ ಕಡೆಗೆ ಹೋಗಲು ಕ್ರಮವಾಗಿ ಮಹದೇಶ್ವರಬೆಟ್ಟ ಮತ್ತು ಅಂದಿಯೂರು ಮಾರ್ಗಗಳಿವೆ. ಇವೆರಡು ಮಾರ್ಗಗಳೂ ಬೆಟ್ಟಗುಡ್ಡಗಳಿಂದ ಕೂಡಿದ್ದು, ಭಾರೀ ವಾಹನಗಳ ಸಂಚಾರ ಕಷ್ಟಕರ ಮಾತ್ರವಲ್ಲದೆ , ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಇದಕ್ಕೆ ಪರ್ಯಾಯವಾಗಿ ಗರಿಕೆಕಂಡಿಯಿಂದ ಪಾಲಾರ್ ವರೆಗೆ ಹೊಸದಾಗಿ ರಸ್ತೆಯನ್ನು ನಿರ್ಮಿಸಿದರೆ, ಒಂದು ಗಂಟೆಯಷ್ಟು ಪ್ರಯಾಣದ ಅವಧಿಯನ್ನು ಉಳಿಸಬಹುದಾಗಿದೆ.
ಗರಿಕೆಕಂಡಿಯಿಂದ ಪಾಲಾರ್ವರೆಗೆ ಸುಮಾರು 25 ಕಿ.ಮೀ. ದೂರವಿದ್ದು, ಈ ಪ್ರದೇಶ ಯಾವುದೇ ಬೆಟ್ಟಗುಡ್ಡಗಳಿಲ್ಲದೆ ಸಮತಟ್ಟಾಗಿದೆ. ಉಭಯ ರಾಜ್ಯಗಳ ಗಡಿಯನ್ನು ನಿರ್ಣಯಿಸುವ ಪಾಲಾರ್ ನದಿ ಇದೇ ಮಾರ್ಗವಾಗಿ ಹರಿಯುತ್ತಿದ್ದು, ನದಿಯ ಎಡ ಭಾಗದಲ್ಲಿ ಈಗಾಗಲೇ ಮಣ್ಣಿನ ರಸ್ತೆ ಇದೆ.
ಇದು 1970ರ ದಶಕದಲ್ಲಿ ಆಮ್ಜಾನ್ ಎಂಬ ಗುತ್ತಿಗೆದಾರರು ಇಲ್ಲಿನ ಅರಣ್ಯ ಪ್ರದೇಶದಿಂದ ಬಿದಿರುಗಳನ್ನು ಸಾಗಿಸಲು ನಿರ್ಮಿಸಿದ ರಸ್ತೆಯಾಗಿದೆ. 1925ರಲ್ಲಿ ಮೆಟ್ಟೂರು ಅಣೆಕಟ್ಟೆ ನಿರ್ಮಿಸುವಾಗ, ಶಿವನಸಮುದ್ರದಿಂದ ಇದೇ ಮಾರ್ಗವಾಗಿ ಕಂಬಗಳನ್ನು ಹಾಕಿ ಮೆಟ್ಟೂರಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿತ್ತು. ಅಲ್ಲದೆ ಸಾರಿಗೆ ಸೌಲಭ್ಯಗಳು ಇಲ್ಲದಿದ್ದ ದಿನಗಳಲ್ಲಿ ಮಾರ್ಟಳ್ಳಿ ಭಾಗದಿಂದ ಮೆಟ್ಟೂರು, ಕೊಳತ್ತೂರು ಕಡೆಗೆ ಕಾಲ್ನಡಿಗೆ ಮತ್ತು ಎತ್ತಿನಗಾಡಿಗಳಲ್ಲಿ ಜನರು ಈ ಮಾರ್ಗವಾಗಿ ಸಂಚರಿಸುತ್ತಿದ್ದರು.
ಈ ಹಳೆಯ ಮಾರ್ಗವನ್ನು ಅಭಿವೃದ್ಧಿಪಡಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ, ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗುವುದಲ್ಲದೆ, ಅಂತರರಾಜ್ಯ ವ್ಯಾಪಾರ ವೃದ್ಧಿಗೂ ಸಹಕಾರಿಯಾಗಲಿದೆ. ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಗಮನ ಹರಿಸುವಂತಾಗಲಿ.
– ಡಾ. ಐ. ಸೇಸುನಾಥನ್, ಮಾರ್ಟಳ್ಳಿ, ಹನೂರು ತಾಲ್ಲೂಕು
ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…
ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…
ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…
ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…
ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…
ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…