Andolana originals

ಓದುಗರ ಪತ್ರ: ಗರಿಕೆಕಂಡಿ – ಪಾಲಾರ್ ನಡುವೆ ರಸ್ತೆ ನಿರ್ಮಿಸಿ

ಹನೂರು ತಾಲ್ಲೂಕಿನ ನಾಲ್‌ರೋಡ್-ಗರಿಕೆಕಂಡಿ ರಸ್ತೆಯನ್ನು ದುರಸ್ತಿಗೊಳಿಸುವ ಬಗ್ಗೆ ಆಂದೋಲನ ದಿನಪತ್ರಿಕೆಯಲ್ಲಿ ಜೂ. 21ರಂದು ವರದಿಯಾಗಿದೆ. ಇದು ಕರ್ನಾಟಕದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಅಂತರ ರಾಜ್ಯ ರಸ್ತೆಯಾಗಿದ್ದು, ಭಾರೀ ವಾಹನಗಳ ಸಂಚಾರದಿಂದ ಹದಗೆಟ್ಟಿತ್ತು.

ಕೊಳ್ಳೇಗಾಲ ಭಾಗದಿಂದ ಸೇಲಂ ಮತ್ತು ಈರೋಡ್ ಕಡೆಗೆ ಹೋಗಲು ಕ್ರಮವಾಗಿ ಮಹದೇಶ್ವರಬೆಟ್ಟ ಮತ್ತು ಅಂದಿಯೂರು ಮಾರ್ಗಗಳಿವೆ. ಇವೆರಡು ಮಾರ್ಗಗಳೂ ಬೆಟ್ಟಗುಡ್ಡಗಳಿಂದ ಕೂಡಿದ್ದು, ಭಾರೀ ವಾಹನಗಳ ಸಂಚಾರ ಕಷ್ಟಕರ ಮಾತ್ರವಲ್ಲದೆ , ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಇದಕ್ಕೆ ಪರ್ಯಾಯವಾಗಿ ಗರಿಕೆಕಂಡಿಯಿಂದ ಪಾಲಾರ್ ವರೆಗೆ ಹೊಸದಾಗಿ ರಸ್ತೆಯನ್ನು ನಿರ್ಮಿಸಿದರೆ, ಒಂದು ಗಂಟೆಯಷ್ಟು ಪ್ರಯಾಣದ ಅವಧಿಯನ್ನು ಉಳಿಸಬಹುದಾಗಿದೆ.

ಗರಿಕೆಕಂಡಿಯಿಂದ ಪಾಲಾರ್‌ವರೆಗೆ ಸುಮಾರು 25 ಕಿ.ಮೀ. ದೂರವಿದ್ದು, ಈ ಪ್ರದೇಶ ಯಾವುದೇ ಬೆಟ್ಟಗುಡ್ಡಗಳಿಲ್ಲದೆ ಸಮತಟ್ಟಾಗಿದೆ. ಉಭಯ ರಾಜ್ಯಗಳ ಗಡಿಯನ್ನು ನಿರ್ಣಯಿಸುವ ಪಾಲಾರ್ ನದಿ ಇದೇ ಮಾರ್ಗವಾಗಿ ಹರಿಯುತ್ತಿದ್ದು, ನದಿಯ ಎಡ ಭಾಗದಲ್ಲಿ ಈಗಾಗಲೇ ಮಣ್ಣಿನ ರಸ್ತೆ ಇದೆ.

ಇದು 1970ರ ದಶಕದಲ್ಲಿ ಆಮ್ಜಾನ್ ಎಂಬ ಗುತ್ತಿಗೆದಾರರು ಇಲ್ಲಿನ ಅರಣ್ಯ ಪ್ರದೇಶದಿಂದ ಬಿದಿರುಗಳನ್ನು ಸಾಗಿಸಲು ನಿರ್ಮಿಸಿದ ರಸ್ತೆಯಾಗಿದೆ. 1925ರಲ್ಲಿ ಮೆಟ್ಟೂರು ಅಣೆಕಟ್ಟೆ ನಿರ್ಮಿಸುವಾಗ, ಶಿವನಸಮುದ್ರದಿಂದ ಇದೇ ಮಾರ್ಗವಾಗಿ ಕಂಬಗಳನ್ನು ಹಾಕಿ ಮೆಟ್ಟೂರಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿತ್ತು. ಅಲ್ಲದೆ ಸಾರಿಗೆ ಸೌಲಭ್ಯಗಳು ಇಲ್ಲದಿದ್ದ ದಿನಗಳಲ್ಲಿ ಮಾರ್ಟಳ್ಳಿ ಭಾಗದಿಂದ ಮೆಟ್ಟೂರು, ಕೊಳತ್ತೂರು ಕಡೆಗೆ ಕಾಲ್ನಡಿಗೆ ಮತ್ತು ಎತ್ತಿನಗಾಡಿಗಳಲ್ಲಿ ಜನರು ಈ ಮಾರ್ಗವಾಗಿ ಸಂಚರಿಸುತ್ತಿದ್ದರು.

ಈ ಹಳೆಯ ಮಾರ್ಗವನ್ನು ಅಭಿವೃದ್ಧಿಪಡಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ, ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗುವುದಲ್ಲದೆ, ಅಂತರರಾಜ್ಯ ವ್ಯಾಪಾರ ವೃದ್ಧಿಗೂ ಸಹಕಾರಿಯಾಗಲಿದೆ. ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಗಮನ ಹರಿಸುವಂತಾಗಲಿ.

– ಡಾ. ಐ. ಸೇಸುನಾಥನ್, ಮಾರ್ಟಳ್ಳಿ, ಹನೂರು ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

59 mins ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

2 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

3 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

4 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

4 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

4 hours ago