Andolana originals

ಓದುಗರ ಪತ್ರ: ಗರಿಕೆಕಂಡಿ – ಪಾಲಾರ್ ನಡುವೆ ರಸ್ತೆ ನಿರ್ಮಿಸಿ

ಹನೂರು ತಾಲ್ಲೂಕಿನ ನಾಲ್‌ರೋಡ್-ಗರಿಕೆಕಂಡಿ ರಸ್ತೆಯನ್ನು ದುರಸ್ತಿಗೊಳಿಸುವ ಬಗ್ಗೆ ಆಂದೋಲನ ದಿನಪತ್ರಿಕೆಯಲ್ಲಿ ಜೂ. 21ರಂದು ವರದಿಯಾಗಿದೆ. ಇದು ಕರ್ನಾಟಕದಿಂದ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಅಂತರ ರಾಜ್ಯ ರಸ್ತೆಯಾಗಿದ್ದು, ಭಾರೀ ವಾಹನಗಳ ಸಂಚಾರದಿಂದ ಹದಗೆಟ್ಟಿತ್ತು.

ಕೊಳ್ಳೇಗಾಲ ಭಾಗದಿಂದ ಸೇಲಂ ಮತ್ತು ಈರೋಡ್ ಕಡೆಗೆ ಹೋಗಲು ಕ್ರಮವಾಗಿ ಮಹದೇಶ್ವರಬೆಟ್ಟ ಮತ್ತು ಅಂದಿಯೂರು ಮಾರ್ಗಗಳಿವೆ. ಇವೆರಡು ಮಾರ್ಗಗಳೂ ಬೆಟ್ಟಗುಡ್ಡಗಳಿಂದ ಕೂಡಿದ್ದು, ಭಾರೀ ವಾಹನಗಳ ಸಂಚಾರ ಕಷ್ಟಕರ ಮಾತ್ರವಲ್ಲದೆ , ಹೆಚ್ಚಿನ ಸಮಯವನ್ನು ತೆಗೆದುಕೊಳ್ಳುತ್ತದೆ. ಇದಕ್ಕೆ ಪರ್ಯಾಯವಾಗಿ ಗರಿಕೆಕಂಡಿಯಿಂದ ಪಾಲಾರ್ ವರೆಗೆ ಹೊಸದಾಗಿ ರಸ್ತೆಯನ್ನು ನಿರ್ಮಿಸಿದರೆ, ಒಂದು ಗಂಟೆಯಷ್ಟು ಪ್ರಯಾಣದ ಅವಧಿಯನ್ನು ಉಳಿಸಬಹುದಾಗಿದೆ.

ಗರಿಕೆಕಂಡಿಯಿಂದ ಪಾಲಾರ್‌ವರೆಗೆ ಸುಮಾರು 25 ಕಿ.ಮೀ. ದೂರವಿದ್ದು, ಈ ಪ್ರದೇಶ ಯಾವುದೇ ಬೆಟ್ಟಗುಡ್ಡಗಳಿಲ್ಲದೆ ಸಮತಟ್ಟಾಗಿದೆ. ಉಭಯ ರಾಜ್ಯಗಳ ಗಡಿಯನ್ನು ನಿರ್ಣಯಿಸುವ ಪಾಲಾರ್ ನದಿ ಇದೇ ಮಾರ್ಗವಾಗಿ ಹರಿಯುತ್ತಿದ್ದು, ನದಿಯ ಎಡ ಭಾಗದಲ್ಲಿ ಈಗಾಗಲೇ ಮಣ್ಣಿನ ರಸ್ತೆ ಇದೆ.

ಇದು 1970ರ ದಶಕದಲ್ಲಿ ಆಮ್ಜಾನ್ ಎಂಬ ಗುತ್ತಿಗೆದಾರರು ಇಲ್ಲಿನ ಅರಣ್ಯ ಪ್ರದೇಶದಿಂದ ಬಿದಿರುಗಳನ್ನು ಸಾಗಿಸಲು ನಿರ್ಮಿಸಿದ ರಸ್ತೆಯಾಗಿದೆ. 1925ರಲ್ಲಿ ಮೆಟ್ಟೂರು ಅಣೆಕಟ್ಟೆ ನಿರ್ಮಿಸುವಾಗ, ಶಿವನಸಮುದ್ರದಿಂದ ಇದೇ ಮಾರ್ಗವಾಗಿ ಕಂಬಗಳನ್ನು ಹಾಕಿ ಮೆಟ್ಟೂರಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿತ್ತು. ಅಲ್ಲದೆ ಸಾರಿಗೆ ಸೌಲಭ್ಯಗಳು ಇಲ್ಲದಿದ್ದ ದಿನಗಳಲ್ಲಿ ಮಾರ್ಟಳ್ಳಿ ಭಾಗದಿಂದ ಮೆಟ್ಟೂರು, ಕೊಳತ್ತೂರು ಕಡೆಗೆ ಕಾಲ್ನಡಿಗೆ ಮತ್ತು ಎತ್ತಿನಗಾಡಿಗಳಲ್ಲಿ ಜನರು ಈ ಮಾರ್ಗವಾಗಿ ಸಂಚರಿಸುತ್ತಿದ್ದರು.

ಈ ಹಳೆಯ ಮಾರ್ಗವನ್ನು ಅಭಿವೃದ್ಧಿಪಡಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರೆ, ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗುವುದಲ್ಲದೆ, ಅಂತರರಾಜ್ಯ ವ್ಯಾಪಾರ ವೃದ್ಧಿಗೂ ಸಹಕಾರಿಯಾಗಲಿದೆ. ಸರ್ಕಾರ ಹಾಗೂ ಜನಪ್ರತಿನಿಧಿಗಳು ಈ ನಿಟ್ಟಿನಲ್ಲಿ ಗಮನ ಹರಿಸುವಂತಾಗಲಿ.

– ಡಾ. ಐ. ಸೇಸುನಾಥನ್, ಮಾರ್ಟಳ್ಳಿ, ಹನೂರು ತಾಲ್ಲೂಕು

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

6 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

8 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

10 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

10 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

11 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

11 hours ago