ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಭಾರತೀಯ ರೈಲ್ವೆ ಇಲಾಖೆಯು ೧೨,೧೫೪ ಕೋಟಿ ರೂ. ಆದಾಯ ಗಳಿಸಿದೆ ಎಂದು ರೈಲ್ವೆ ಸಚಿವರು ಮಾಹಿತಿ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ.
ಕಳೆದ ಹತ್ತು ವರ್ಷಗಳಿಂದಲೂ ರೈಲಿನಲ್ಲಿ ಪ್ರಯಾಣಿಸುವ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪ್ರಯಾಣದ ದರದಲ್ಲಿ ಶೇ.೩೦ರಷ್ಟು ರಿಯಾಯಿತಿ ನೀಡಲಾಗುತ್ತಿತ್ತು. ಆದರೆ, ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡಿದ್ದ ಸಂದರ್ಭದಲ್ಲಿ ಹಿರಿಯ ನಾಗರಿಕರು ಸಾರ್ವಜನಿಕ ವಾಹನಗಳಲ್ಲಿ ಓಡಾಡುವುದನ್ನು ಸ್ಪಲ್ಪ ಮಟ್ಟಿಗಾದರೂ ತಪ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ರೈಲ್ವೆ ಪ್ರಯಾಣ ದರದಲ್ಲಿ ಹಿರಿಯರಿಗೆ ನೀಡುತ್ತಿದ್ದ ರಿಯಾಯಿತಿಯನ್ನು ನಿಲ್ಲಿಸಿತು. ಇದರಿಂದಾಗಿ ಆರಂಭದಲ್ಲಿ ಆದಾಯದ ಪ್ರಮಾಣವೂ ಸ್ಪಲ್ಪಮಟ್ಟಿಗೆ ತಗ್ಗಿತಾದರೂ ಈಗ ಅದು ಮತ್ತೆ ಏರಿಕೆ ಕಂಡಿದೆ.
ಸದ್ಯ ದೇಶದಲ್ಲಿ ಕೊರೊನಾ ಸೋಂಕು ತೀರಾ ಕಡಿಮೆಯಾಗಿದ್ದು, ರೈಲ್ವೆ ಇಲಾಖೆಯೂ ಲಾಭದಾಯಕವಾಗಿ ಮುಂದುವರಿಯುತ್ತಿದೆ. ಆದ್ದರಿಂದ ರೈಲ್ವೆ ಸಚಿವರು ಹಿರಿಯ ನಾಗರಿಕರಿಗೆ ರೈಲ್ವೆ ಪ್ರಯಾಣ ದರದಲ್ಲಿ ಈ ಹಿಂದೆ ಇದ್ದ ಶೇ.೩೦ರಷ್ಟು ರಿಯಾಯಿತಿಯನ್ನು ಶೇ.೪೦ಕ್ಕೆ ಏರಿಸುವ ಮೂಲಕ ರಿಯಾಯಿತಿಯನ್ನು ಮರುಜಾರಿಗೆ ತರಬೇಕಿದೆ.
–ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…