Mysore
28
overcast clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಓದುಗರ ಪತ್ರ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನೆ ಹಾಗೂ ನೌಕಾ ನೆಲೆಗಳ ಮೇಲೆ ಇರಾನ್ ನಡೆಸುತ್ತಿರುವ ಕ್ಷಿಪಣಿ ದಾಳಿಗಳಿಂದಾಗಿ ಅಲ್ಲಿನ ನಾಗರಿಕರು ಹಾಗೂ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಅನಿವಾಸಿ ಭಾರತೀಯರಲ್ಲಿ ಆತಂಕ ಉಂಟಾಗಿದೆ.

ಈ ಯುದ್ಧದ ಪರಿಣಾಮ ಭಾರತದ ಮೇಲೂ ಆಗಲಿದೆ. ಭಾರತಕ್ಕೆ ಸರಬರಾಜಾಗುವ ಕಚ್ಚಾ ತೈಲದ ಹಡಗುಗಳು ಇರಾನ್‌ನ ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗಬೇಕಾಗಿದ್ದು, ಅಲ್ಲಿ ಹಡಗುಗಳ ಸಂಚಾರವನ್ನು ನಿಷೇಧಿಸಿರುವುದರಿಂದ ಭಾರತಕ್ಕೆ ಇಂಧನ ಪೂರೈಕ ಸ್ಥಗಿತವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತದೆ. ವಿಶ್ವಸಂಸ್ಥೆ ಕೂಡಲೇ ಮಧ್ಯ ಪ್ರವೇಶಿಸಿ ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸುವ ಮೂಲಕ ಶಾಂತಿ ಕಾಪಾಡಲು ಕ್ರಮ ಕೈಗೊಳ್ಳುವುದು ಅಗತ್ಯ.

-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು

Tags:
error: Content is protected !!