Andolana originals

ಓದುಗರ ಪತ್ರ: ಕೊಲ್ಲಿ ರಾಷ್ಟ್ರಗಳಲ್ಲಿ ಮುಂದುವರಿದ ಆತಂಕ

ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ ಅಮೆರಿಕದ ಸೇನೆ ಹಾಗೂ ನೌಕಾ ನೆಲೆಗಳ ಮೇಲೆ ಇರಾನ್ ನಡೆಸುತ್ತಿರುವ ಕ್ಷಿಪಣಿ ದಾಳಿಗಳಿಂದಾಗಿ ಅಲ್ಲಿನ ನಾಗರಿಕರು ಹಾಗೂ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಅನಿವಾಸಿ ಭಾರತೀಯರಲ್ಲಿ ಆತಂಕ ಉಂಟಾಗಿದೆ.

ಈ ಯುದ್ಧದ ಪರಿಣಾಮ ಭಾರತದ ಮೇಲೂ ಆಗಲಿದೆ. ಭಾರತಕ್ಕೆ ಸರಬರಾಜಾಗುವ ಕಚ್ಚಾ ತೈಲದ ಹಡಗುಗಳು ಇರಾನ್‌ನ ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗಬೇಕಾಗಿದ್ದು, ಅಲ್ಲಿ ಹಡಗುಗಳ ಸಂಚಾರವನ್ನು ನಿಷೇಧಿಸಿರುವುದರಿಂದ ಭಾರತಕ್ಕೆ ಇಂಧನ ಪೂರೈಕ ಸ್ಥಗಿತವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತದೆ. ವಿಶ್ವಸಂಸ್ಥೆ ಕೂಡಲೇ ಮಧ್ಯ ಪ್ರವೇಶಿಸಿ ಮಧ್ಯ ಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸುವ ಮೂಲಕ ಶಾಂತಿ ಕಾಪಾಡಲು ಕ್ರಮ ಕೈಗೊಳ್ಳುವುದು ಅಗತ್ಯ.

-ಬಿ.ಗಣೇಶ, ಕೆ.ಜಿ.ಕೊಪ್ಪಲು,ಮೈಸೂರು

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

1 hour ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

1 hour ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

2 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

5 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

5 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

6 hours ago