ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ. ಇಲ್ಲಿನ ಹಸಿರು ಪರಿಸರ ಹಾಗೂ ಹಕ್ಕಿಗಳ ಕಲರವ ಜನರ ಮನಸ್ಸಿಗೆ ಮುದ ನೀಡುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಕೆರೆ ಅಂಗಳದಲ್ಲಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿ ಹೆಚ್ಚಿದ್ದು, ಸಾರ್ವಜನಿಕರು ಆತಂಕದಲ್ಲಿ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಕೆರೆಗೆ ಬರುವ ಕೆಲವರು ನಾಯಿಗಳಿಗೆ ಬಿಸ್ಕತ್ ಹಾಗೂ ಬನ್ಗಳನ್ನು ಹಾಕುತ್ತಿರುವುದರಿಂದ ನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಅತಿಯಾದ ಆಹಾರ ಸೇವನೆಯಿಂದ ಉದ್ರೇಕಗೊಳ್ಳುವ ಕೆಲವು ನಾಯಿಗಳು ವಾಯುವಿಹಾರಿಗಳ ಮೇಲೆ ಎರಗಲು ಪ್ರಯತ್ನಿಸುತ್ತಿವೆ. ಇದರೊಂದಿಗೆ, ಕೆಲವರು ಪಾರಿವಾಳಗಳಿಗೆ ಕಾಳುಗಳನ್ನು ಹಾಕುತ್ತಿರುವು ದರಿಂದ ಅಲ್ಲಿ ಅನಧಿಕೃತವಾಗಿ ಪ್ರಾಣಿ-ಪಕ್ಷಿಗಳಿಗೆ ಆಹಾರ ನೀಡುವ ಪ್ರವೃತ್ತಿ ಬೆಳೆದಿದೆ. ಈ ಎ ಕಾರಣಗಳಿಂದಾಗಿ ಹಿರಿಯ ನಾಗರಿಕರು, ಮಹಿಳೆಯರು ಮತ್ತು ಮಕ್ಕಳು ನೆಮ್ಮದಿಯಿಂದ ವಾಯುವಿಹಾರ ಮಾಡಲು ಸಾಧ್ಯವಾಗದಂತಹ ಸ್ಥಿತಿ ಉಂಟಾಗಿದೆ.
ಆದ್ದರಿಂದ ಸಂಬಂಧಪಟ್ಟವರು ಎಚ್ಚೆತ್ತುಕೊಂಡು ಕೆರೆ ಅಂಗಳದಲ್ಲಿ ಯಾವುದೇ ಪ್ರಾಣಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಬೇಕು. ಅಲ್ಲದೆ, ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು.
-ಬಿ. ಗಣೇಶ, ಮೈಸೂರು



