ರಾಜಧಾನಿ ಬೆಂಗಳೂರು ನಗರವು ಇಂದು ಐಟಿ ಬಿಟಿಯಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿದ್ದರೂ ಸಂಚಾರ ದಟ್ಟಣೆಯಲ್ಲಿ ವಿಶ್ವದಲ್ಲೇ ಎರಡನೇ ಸ್ಥಾನವನ್ನು ಪಡೆದಿರುವುದು ಬೇಸರದ ಸಂಗತಿಯಾಗಿದೆ. ಅವ್ಯವಸ್ಥಿತ ರಸ್ತೆ ಕಾಮಗಾರಿ, ದಿನೇ ದಿನೇ ಹೆಚ್ಚುತ್ತಿರುವ ವಾಹನಗಳ ಸಂಖ್ಯೆ, ದುರ್ಬಲ ಸಂಚಾರ ನಿಯಂತ್ರಣ ವ್ಯವಸ್ಥೆಗಳು ಸಂಚಾರ ದಟ್ಟಣೆ ಹೆಚ್ಚಲು ಕಾರಣವಾಗಿದೆ.
ಈ ಸಮಸ್ಯೆಯಿಂದ ನಾಗರಿಕರು ಸಮಯ ನಷ್ಟ ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಸಂಬಂಧಪಟ್ಟವರು ಸಂಚಾರ ದಟ್ಟಣೆಗೆ ಸಮಸ್ಯೆ ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳುದ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆ ನಿವಾರಿಸಲು ಕ್ರಮ ಕೈಗೊಳ್ಳಬೇಕು.
-ಸಿ.ದಿವ್ಯಶ್ರೀ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು ಮೈಸೂರು





