ಓದುಗರ ಪತ್ರ
ಮೈಸೂರಿನ ಕುಂಬಾರ ಕೊಪ್ಪಲು, ಹೆಬ್ಬಾಳು, ವಿಜಯನಗರ ಎರಡನೇ ಹಂತ ಮತ್ತು ಮಂಚೇಗೌಡನ ಕೊಪ್ಪಲಿಗೆ ಸಂಪರ್ಕ ಕಲ್ಪಿಸುವ ಸೂರ್ಯ ಬೇಕರಿ ವೃತ್ತದ ರಸ್ತೆಗಳು ಕಿರಿದಾಗಿದ್ದು, ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ.
ಸೂರ್ಯ ಬೇಕರಿ ವೃತ್ತ ಹೆಚ್ಚು ವಾಹನ ದಟ್ಟಣೆಯಿಂದ ಕೂಡಿರುವ ಜತೆಗೆ ಜನನಿಬಿಡ ಪ್ರದೇಶವಾಗಿದೆ. ಇಂತಹ ಜಾಗದಲ್ಲಿ ರಸ್ತೆಗಳು ಕಿರಿದಾಗಿರುವ ಪರಿಣಾಮ ಹೆಚ್ಚು ಟ್ರಾಫಿಕ್ ಸಮಸ್ಯೆ ಕಾಡುತ್ತಿದ್ದು, ಈ ರಸ್ತೆಯಲ್ಲಿ ಓಡಾಡುವುದೇ ದೊಡ್ಡ ಸಾಹಸ ವಾಗಿಹೋಗಿದೆ. ಇನ್ನು ಈ ಸರ್ಕಲ್ನಲ್ಲಿ ಸಿಗ್ನಲ್ ಲೈಟ್ ವ್ಯವಸ್ಥೆಯೂ ಇಲ್ಲದಿರುವ ಪರಿಣಾಮ ನಿತ್ಯ ಒಂದಿಲ್ಲೊಂದು ಅಪಘಾತಗಳಾಗುತ್ತಿವೆ. ಆದ್ದರಿಂದ ಸಂಬಂಧಪಟ್ಟವರು ರಸ್ತೆ ಅಗಲೀಕರಣ ಮಾಡುವ ಜತೆಗೆ ವಾಹನ ದಟ್ಟಣೆ ನಿಯಂತ್ರಿಸಲು ಸಿಗ್ನಲ್ ಲೈಟ್ಗಳನ್ನು ಅಳವಡಿಸಿ, ಸಂಚಾರ ಪೊಲೀಸರನ್ನು ನಿಯೋಜಿಸಬೇಕಿದೆ.
-ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು.
ಚೆನ್ನೈ : ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಟಿವಿಕೆ ಮುಖ್ಯಸ್ಥ ದಳಪತಿ ವಿಜಯ್ ಅವರ ಕಾರು ಚಾಲಕನ…
ಮೈಸೂರು : ಪಂಚ ರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಮೂರು ರಾಜ್ಯಗಳಲ್ಲಿ ಗೆಲುವು ಲಭಿಸಿದ ಹಿನ್ನೆಲೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬಿಜೆಪಿ…
ಚೆನ್ನೈ : ನಟಿ ತ್ರಿಶಾ ಕೃಷ್ಣನ್ ತಮ್ಮ ಹುಟ್ಟುಹಬ್ಬದ ನಿಮಿತ್ತ ಸೋಮವಾರ ಬೆಳಿಗ್ಗೆ ತಿರುಮಲ ತಿರುಪತಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.…
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…