Andolana originals

ಓದುಗರ ಪತ್ರ: ರೈಲಿನಲ್ಲಿ ಧೂಮಪಾನ ಮಾಡುವವರಿಗೆ ಕಡಿವಾಣ ಹಾಕಿ

ಮೈಸೂರು-ಚಾಮರಾಜನಗರ ನಡುವೆ ಸಂಚರಿಸುವ ರೈಲಿನಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ನಿತ್ಯ ಈ ರೈಲಿನಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಆದರೆ ಮಧ್ಯಾಹ್ನ ೩.೩೦ರ ವೇಳೆಗೆ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ರೈಲಿನ ಸಾಮಾನ್ಯ ಬೋಗಿಗಳಲ್ಲಿ ಟಿಕೆಟ್ ತಪಾಸಣೆ ಮಾಡಲು ಯಾವುದೇ ಅಧಿಕಾರಿಗಳು ಬಾರದೆ ಇರುವ ಪರಿಣಾಮ ಕೆಲವರು ರೈಲಿನ ಶೌಚಾಲಯಗಳು ಹಾಗೂ ಬಾಗಿಲ ಬಳಿ ನಿಂತು ಧೂಮಪಾನ ಹಾಗೂ ಮದ್ಯಪಾನ ಮಾಡುತ್ತಾರೆ.

ಈ ವಿಚಾರವನ್ನು ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರಿಗೆ ಮುಜುಗರವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ರೈಲಿನಲ್ಲಿ ಧೂಮಪಾನ, ಮದ್ಯಪಾನ ಮಾಡುವವರಿಗೆ ಕಡಿವಾಣ ಹಾಕಬೇಕಿದೆ.

ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನಪ್ರತಿನಿಧಿಗಳಿಂದಲೇ ಕಾನೂನು ಉಲ್ಲಂಘನೆ

ರಾಜಕಾರಣಿಗಳು ಪ್ರತಿನಿತ್ಯ ತಮ್ಮ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವ, ವೈಯಕ್ತಿಕ ಪ್ರಚಾರ ಸಂಬಂಧ ಸಾರ್ವಜನಿಕ ಸ್ಥಳಗಳಲ್ಲಿ ಫ್ಲೆಕ್ಸ್, ಪೋಸ್ಟರ್, ಬ್ಯಾನರ್‌ಗಳನ್ನು ಅಳವಡಿಸಿ…

1 hour ago

ಓದುಗರ ಪತ್ರ: ಗಗನಕ್ಕೇರುತ್ತಿರುವ ಚಿನ್ನ, ಬೆಳ್ಳಿ ಬೆಲೆ

ಕಳೆದ ೨೫ ವರ್ಷಗಳಲ್ಲಿ ಷೇರುಪೇಟೆ ಸೇರಿದಂತೆ ಉಳಿದೆಲ್ಲ ಸ್ಥಿರಾಸ್ತಿಗಳ ಮೇಲಿನ ಹೂಡಿಕೆಗಿಂತ ಚಿನ್ನ ಮತ್ತು ಬೆಳ್ಳಿಯ ಮೇಲಿನ ಹೂಡಿಕೆ ಅತಿ…

1 hour ago

ಓದುಗರ ಪತ್ರ: ಕೆ.ಆರ್.ಆಸ್ಪತ್ರೆ ಆವರಣದಲ್ಲಿ ಕೋತಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಕೆ.ಆರ್. ಆಸ್ಪತ್ರೆಯ ಕಲ್ಲು ಬಿಲ್ಡಿಂಗ್ ಬಳಿ ಕೋತಿಗಳ ಹಾವಳಿ ಮಿತಿ ಮೀರಿದ್ದು, ರೋಗಿಗಳ ಸಂಬಂಧಿಕರು ತರುವ ಊಟ, ತಿಂಡಿ…

1 hour ago

ಓದುಗರ ಪತ್ರ: ಶ್ರೀಕಂಠೇಶ್ವರ ದೇಗುಲದಲ್ಲಿ ಹಿರಿಯ ನಾಗರಿಕರಿಗೆ ಪ್ರತ್ಯೇಕ ಸಾಲು ಇರಲಿ

ದಕ್ಷಿಣಕಾಶಿ ಎಂದೇ ಪ್ರಖ್ಯಾತವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ದೇಶ ವಿದೇಶಗಳಿಂದ ಭಕ್ತಾದಿಗಳು ಆಗಮಿಸುತ್ತಾರೆ. ಸರ್ಕಾರಿ ರಜಾ ದಿನಗಳಲ್ಲಿ ಭಕ್ತರ ಸಂಖ್ಯೆ…

1 hour ago

ರಾಜಾಸೀಟ್‌ನಲ್ಲಿ ಸ್ಥಾಪನೆಯಾಗಲಿದೆ ಫುಡ್‌ ಕೋರ್ಟ್‌

ನವೀನ್ ಡಿಸೋಜ ಖಾಸಗಿ ಸಹಭಾಗಿತ್ವದಲ್ಲಿ ಆರಂಭಕ್ಕೆ ಸಚಿವ ಸಂಪುಟದಲ್ಲಿ ಒಪ್ಪಿಗೆ; ಟ್ರಾಫಿಕ್ ಕಿರಿಕಿರಿಗೂ ಕಡಿವಾಣ ಮಡಿಕೇರಿ: ನಗರದ ರಾಜಾಸೀಟ್ ಆವರಣದಲ್ಲಿ…

1 hour ago

ಜಲಾಶಯಗಳ ಹಿನ್ನೀರಿನಲ್ಲಿ ರಿವರ್ ಟರ್ನ್ ಪಕ್ಷಿಗಳ ಕಲರವ

ಮಂಜು ಕೋಟೆ ಕೋಟೆ: ಹಿಮಾಲಯ, ಇನ್ನಿತರ ಪ್ರದೇಶಗಳಿಂದ ವಲಸೆ ಬಂದಿರುವ ಹಕ್ಕಿಗಳು; ಪರಿಸರ ಪ್ರಿಯರಲ್ಲಿ ಸಂತ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿರುವ ಜಲಾಶಯಗಳ…

1 hour ago