Andolana originals

ಓದುಗರ ಪತ್ರ: ರೈಲಿನಲ್ಲಿ ಧೂಮಪಾನ ಮಾಡುವವರಿಗೆ ಕಡಿವಾಣ ಹಾಕಿ

ಮೈಸೂರು-ಚಾಮರಾಜನಗರ ನಡುವೆ ಸಂಚರಿಸುವ ರೈಲಿನಲ್ಲಿ ಧೂಮಪಾನ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು, ಪ್ರಯಾಣಿಕರಿಗೆ ನಿತ್ಯ ಕಿರಿಕಿರಿಯಾಗುತ್ತಿದೆ. ನಿತ್ಯ ಈ ರೈಲಿನಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಸೇರಿದಂತೆ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಆದರೆ ಮಧ್ಯಾಹ್ನ ೩.೩೦ರ ವೇಳೆಗೆ ಮೈಸೂರಿನಿಂದ ಚಾಮರಾಜನಗರಕ್ಕೆ ತೆರಳುವ ರೈಲಿನ ಸಾಮಾನ್ಯ ಬೋಗಿಗಳಲ್ಲಿ ಟಿಕೆಟ್ ತಪಾಸಣೆ ಮಾಡಲು ಯಾವುದೇ ಅಧಿಕಾರಿಗಳು ಬಾರದೆ ಇರುವ ಪರಿಣಾಮ ಕೆಲವರು ರೈಲಿನ ಶೌಚಾಲಯಗಳು ಹಾಗೂ ಬಾಗಿಲ ಬಳಿ ನಿಂತು ಧೂಮಪಾನ ಹಾಗೂ ಮದ್ಯಪಾನ ಮಾಡುತ್ತಾರೆ.

ಈ ವಿಚಾರವನ್ನು ರೈಲ್ವೆ ಅಧಿಕಾರಿಗಳ ಗಮನಕ್ಕೆ ತಂದರೂ ಅವರು ನಿರ್ಲಕ್ಷ್ಯ ತೋರುತ್ತಿದ್ದಾರೆ. ಇದರಿಂದಾಗಿ ಪ್ರಯಾಣಿಕರಿಗೆ ಮುಜುಗರವಾಗುತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ರೈಲಿನಲ್ಲಿ ಧೂಮಪಾನ, ಮದ್ಯಪಾನ ಮಾಡುವವರಿಗೆ ಕಡಿವಾಣ ಹಾಕಬೇಕಿದೆ.

ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ವಾಹನ ಸವಾರರ ಗಮನಕ್ಕೆ ; ಏಪ್ರಿಲ್‌ 1 ರಿಂದ ಟೋಲ್‌ಗಳಲ್ಲಿ ಇಲ್ಲ ನಗದು ಪಾವತಿ

ಹೊಸದಿಲ್ಲಿ : ಮುಂಬರುವ ಏಪ್ರಿಲ್‌ನಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ರಸ್ತೆಗಳ ಟೋಲ್ ಪ್ಲಾಜಾಗಳಲ್ಲಿ ನಗದು ವಹಿವಾಟುಗಳನ್ನು ಸ್ವೀಕರಿಸುವುದಿಲ್ಲ ಎಂದು ರಸ್ತೆ…

11 hours ago

ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಗಂಭೀರ ; ಅರಣ್ಯ ಇಲಾಖೆ ಸಿಬ್ಬಂದಿಗೂ ಗಾಯ

ಸಿದ್ದಾಪುರ : ವಿರಾಜಪೇಟೆ ತಾಲ್ಲೂಕಿನ ಮಾಲ್ದಾರೆ ಸಮೀಪದ ತಟ್ಟಳ್ಳಿಯಲ್ಲಿ ಕಾಫಿ ತೋಟದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ…

12 hours ago

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು…

12 hours ago

ಚಿರತೆ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ

ತಿ.ನರಸೀಪುರ : ತಾಲ್ಲೂಕಿನ ಕೇತಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ. ಗ್ರಾಮದಲ್ಲಿ ರಾತ್ರಿ ವೇಳೆ ಚಿರತೆ ಸಂಚರಿಸುತ್ತಿದ್ದುದನ್ನು ಯುವಕರಿಬ್ಬರು…

12 hours ago

ಸ್ನೇಹಮಯಿ ಕೃಷ್ಣ ಮನೆಯಲ್ಲಿ ಸಿಸಿಬಿ ಪೊಲೀಸರಿಂದ ತಲಾಶ್‌ ; ಮಹತ್ವದ ದಾಖಲೆ ಲಭ್ಯ

ಮೈಸೂರು : ಈ ಹಿಂದೆ ಎಂಡಿಎ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಡಿ.ಬಿ.ನಟೇಶ್ ಅವರ ವಿರುದ್ಧ ಲಂಚ ನೀಡಿರುವ ಆರೋಪ ಹೊರಿಸಿದ್ದ…

13 hours ago

ಹುಲಿ ಕಳೇಬರ ಪತ್ತೆ ಪ್ರಕರಣ : ಓರ್ವ ಬಂಧನ

ಹನೂರು : ಇಲ್ಲಿನ ಗುಂಡಾಲ್ ಜಲಾಶಯದಲ್ಲಿ ಹುಲಿ ಕಳೇಬರ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೋರ್ವನನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.…

13 hours ago