Andolana originals

ಓದುಗರ ಪತ್ರ: ಪಾದಚಾರಿ ಮಾರ್ಗಕ್ಕೂ ಅಡ್ಡಗಾಲು

ಮೈಸೂರಿನ ಕುವೆಂಪು ನಗರ ಕಾಂಪ್ಲೆಕ್ಸ್ ಹತ್ತಿರ ಇರುವ ಒಂದನೇ ಹಂತ (ಇಡಬ್ಲ್ಯು ಎಸ್) ೩ನೇ ಕ್ರಾಸ್ ಬಳಿ ರಸ್ತೆಯ ಒಂದು ಬದಿಯಲ್ಲಿ ಸುಂದರ ಹಾಗೂ ಸುಸಜ್ಜಿತವಾದ ಪಾದಚಾರಿ ಮಾರ್ಗವನ್ನು ನಿರ್ಮಿಸಲಾಗಿದೆ. ಈ ರಸ್ತೆಯ ಬದಿ ಇರುವ ಹಲವು ಸಜ್ಜನರು ತಮ್ಮ ತಮ್ಮ ಮನೆಯ ಎದುರು ಇರುವ ಪಾದಚಾರಿ ಮಾರ್ಗವನ್ನು ಸುಂದರವಾಗಿಟ್ಟುಕೊಂಡಿದ್ದಾರೆ.

ಆದರೆ ಈ ರಸ್ತೆಯ ಕೆಲವು ವ್ಯಾಪಾರಿಗಳು ತಮ್ಮ ಅಂಗಡಿಯ ಎದುರು ಇರುವ ಪಾದಚಾರಿ ಮಾರ್ಗದ ಮೇಲೆ ಸಾಲಾಗಿ ವಾಹನಗಳನ್ನು ಅಡ್ಡವಾಗಿ ನಿಲ್ಲಿಸಿ ಪಾದಚಾರಿಗಳಿಗೆ ಕಿರಿಕಿರಿ ಉಂಟುಮಾಡುತ್ತಿzರೆ. ಹಾಗೆಯೇ ಈ ೩ ನೇ ಕ್ರಾಸ್ ತಿರುವಿನಲ್ಲಿ ಪಾದಚಾರಿಗಳು ಓಡಾಡದಂತೆ ಪಾಲಿಕೆಯು ಫಲಕ ಅಳವಡಿಸಿದೆ ಹಾಗೂ ತೆಂಗಿನ ಮರದ ತ್ಯಾಜ್ಯಗಳನ್ನು ಇಡಲಾಗಿದೆ.

ಇದರೊಂದಿಗೆ ಜಹೀರಾತು ಫಲಕವೂ ಪಾದಚಾರಿಗಳಿಗೆ ಅಡ್ಡಗಾಲಾಗಿದೆ. ಈ ಕೂಡಲೇ ಪಾಲಿಕೆಯು ಎಚ್ಚೆತ್ತು ಕುವೆಂಪು ನಗರದ ಈ ಪಾದಚಾರಿ ಮಾರ್ಗದ ಮೇಲೆ ಇರುವ ದ್ವಿಚಕ್ರವಾಹನ, ಪಾಲಿಕೆಯ ಫಲಕ ಹಾಗೂ ತ್ಯಾಜ್ಯಗಳನ್ನು ತೆರವುಗೊಳಿಸಿ ಪಾದಚಾರಿಗಳ ಹಕ್ಕುಗಳನ್ನು ರಕ್ಷಿಸಬೇಕಾಗಿದೆ.

-ಪಿ.ಜೆ.ರಾಘವೇಂದ್ರ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮದ್ದು ಅರೆಯಲಿ ಆಳುವವರು!

ಮದ್ದು ಅರೆಯಲಿ ಆಳುವವರು! ಬಗೆದಷ್ಟೂ ಬಯಲಾಗುತಿದೆ ಬ್ರಹ್ಮಾಂಡ ಭ್ರಷ್ಟಾಚಾರ ನೆಲದಾಳಕೂ ಬೇರೂರಿದೆ ಕೆಪಿಎಸ್‌ಸಿಯ ಕರ್ಮಕಾಂಡ! ಹಣವಂತರ ಆಡುಂಬಲವಿದು ಹರಣವಾಗುತಿದೆ ಬಡವನ…

4 mins ago

ಓದುಗರ ಪತ್ರ: ಈ ಶೌಚಾಲಯ ಪ್ರಾರಂಭಕ್ಕೆ ಮುಹೂರ್ತ ಬಂದಿಲ್ಲವೇ?

ಹೆಚ್. ಡಿ. ಕೋಟೆ ಮಿನಿ ವಿಧಾನಸೌಧ ಆಡಳಿತ ಕಚೇರಿ ಪಕ್ಕದಲ್ಲಿ ಸಾರ್ವಜನಿಕರಿಗಾಗಿ ಸಾಕಷ್ಟು ಹಣ ಖರ್ಚು ಮಾಡಿ ಶೌಚಾಲಯವನ್ನು ನಿರ್ಮಾಣ…

7 mins ago

ಓದುಗರ ಪತ್ರ: 365 ದಿನಗಳೂ ಸಾರ್ವಜನಿಕ ಗ್ರಂಥಾಲಯಗಳ ಸೇವೆ ಲಭ್ಯವಿರಲಿ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಬೆಂಗಳೂರು, ಮೈಸೂರು ಸೇರಿದಂತೆ ಹಲವು ನಗರಗಳಲ್ಲಿ ಸಾರ್ವಜನಿಕ ಗ್ರಂಥಾಲಯಗಳು…

8 mins ago

ಯುವಜನರ ಕೈಯಲ್ಲಿ ಮೊಬೈಲ್ ಇದೆ; ದಿಕ್ಕು ಇದೆಯೇ?

ಟಿ.ಕೆ.ಹರೀಶ್ ತಕ್ಷಣದ ಯಶಸ್ಸಿನ ಸಂಸ್ಕೃತಿಯಿಂದ ಅಪಾಯಕಾರಿ ; ಯುವಜನರಿಗೆ ಮನವರಿಕೆ ಅಗತ್ಯ ಇಂದು ಒಂದು ಮಗು ಹುಟ್ಟಿದಾಗ ಅದರ ಸುತ್ತಲೂ…

11 mins ago

ಕಾಯಿಗಟ್ಟುವ ಸಮಯದಲ್ಲೇ ಹಣ್ಣಾಗುತ್ತಿರುವ ಅರೆಬಿಕಾ ಕಾಫಿ

ಲಕ್ಷ್ಮಿಕಾಂತ್ ಕೊಮಾರಪ್ಪ ಹವಾಮಾನ ವೈಪರೀತ್ಯದಿಂದ ಬೆಳೆಗಾರರಿಗೆ ಹೊಸ ಸಂಕಷ್ಟ; ಕೊಯ್ಲು, ಪಲ್ಪಿಂಗ್ ಜೊತೆಗೆ ಒಣಗಿಸುವುದೂ ಸವಾಲು ಸೋಮವಾರಪೇಟೆ: ಕಾಫಿ ತೋಟಗಳಲ್ಲಿ…

17 mins ago

ಮುತ್ತತ್ತಿಯ ನಿಷೇಧಿತ ಪ್ರದೇಶಗಳಲ್ಲಿ ಕಾವೇರಿ ನದಿಗಿಳಿದು ದುಸ್ಸಾಹಸ

ಉಮೇಶ್ ಹಲಗೂರು ಪ್ರವಾಸಿಗರನ್ನು ರಕ್ಷಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ ಲು ಸಾರ್ವಜನಿಕರ ಆಗ್ರಹ ಜಿಲ್ಲಾಡಳಿತದ ಆದೇಶಕ್ಕೂ ಕ್ಯಾರೇ ಎನ್ನದ ಪ್ರವಾಸಿಗರು…

23 mins ago