ಓದುಗರ ಪತ್ರ
ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ ಇಷ್ಟು ಸಂಖ್ಯೆಯಲ್ಲಿ ಸೇರಿದ್ದೀರಿ ? ಯಾರಿಗಾಗಿ ಕೊಡಲು ಈ ಖರೀದಿ ಎಂದಾಗ ಕ್ರಿಸ್ ಮಸ್ ಹಬ್ಬಕ್ಕಾಗಿ ಫ್ರೆಂಡ್ಸ್ ಹಾಗೂ ನಮ್ಮ ಶಿಕ್ಷಕರಿಗೆ ಗಿಫ್ಟ್ ಖರೀದಿಸಲು ಬಂದಿದ್ದೇವೆ ಎಂದರು. ಇದು ಒಳ್ಳೆಯ ಬೆಳವಣಿಗೆ. ಆದರೆ ಬೇರೆ ಎಲ್ಲಾ ಉಡುಗೊರೆಗಳ ಬದಲು ಪುಸ್ತಕವನ್ನು ನೀಡಿದರೆ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ.
ಪುಸ್ತಕಗಳನ್ನು ಓದುವವರ ಸಂಖ್ಯೆಯೇ ವಿರಳವಾಗುತ್ತಿರುವಾಗ ಶಾಲೆಗಳಲ್ಲಿ ಮಕ್ಕಳಿಗೆ ಕಥೆ , ಕಾದಂಬರಿ, ಅನುಭವ ಕಥನ ಹೀಗೆ ಮಕ್ಕಳ ನೈತಿಕ ಬೆಳವಣಿಗೆಗೆ ಪೂರಕವಾಗುವಂತಹ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇಂಬು ನೀಡಿದಂತಾಗುತ್ತದೆ. ಮಕ್ಕಳು ಪಠ್ಯದ ಜೊತೆಗೆ ಇತರ ಕೃತಿಗಳನ್ನು ಓದುವ ಹವ್ಯಾಸ ರೂಢಿಸಿಕೊಂಡಂತಾಗುತ್ತದೆ.
-ಎಂ.ಜೆ.ರುದ್ರಮೂರ್ತಿ, ಚಿತ್ರದುರ್ಗ
ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…
ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…
ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…
ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…
ಮೋಹಿತ್ ಎಸ್ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…