Andolana originals

ಓದುಗರ ಪತ್ರ: ಪುಸ್ತಕ ಉಡುಗೊರೆ ಸಂಸ್ಕೃತಿ ಬೆಳೆಸಿ

ಚಿತ್ರದುರ್ಗದ ಪೇಟೆ ಬೀದಿಯ ಉಡುಗೊರೆ (ಗಿಫ್ಟ್) ಮಾರಾಟ ಮಳಿಗೆ ಮಕ್ಕಳು ಮತ್ತು ಪೋಷಕರಿಂದ ತುಂಬಿ ಹೋಗಿತ್ತು. ಅಲ್ಲಿದ್ದ ಹುಡುಗರನ್ನು ಏಕೆ ಇಷ್ಟು ಸಂಖ್ಯೆಯಲ್ಲಿ ಸೇರಿದ್ದೀರಿ ? ಯಾರಿಗಾಗಿ ಕೊಡಲು ಈ ಖರೀದಿ ಎಂದಾಗ ಕ್ರಿಸ್ ಮಸ್ ಹಬ್ಬಕ್ಕಾಗಿ ಫ್ರೆಂಡ್ಸ್ ಹಾಗೂ ನಮ್ಮ ಶಿಕ್ಷಕರಿಗೆ ಗಿಫ್ಟ್ ಖರೀದಿಸಲು ಬಂದಿದ್ದೇವೆ ಎಂದರು. ಇದು ಒಳ್ಳೆಯ ಬೆಳವಣಿಗೆ. ಆದರೆ ಬೇರೆ ಎಲ್ಲಾ ಉಡುಗೊರೆಗಳ ಬದಲು ಪುಸ್ತಕವನ್ನು ನೀಡಿದರೆ ಜ್ಞಾನಾರ್ಜನೆಗೆ ಸಹಕಾರಿಯಾಗುತ್ತದೆ.

ಪುಸ್ತಕಗಳನ್ನು ಓದುವವರ ಸಂಖ್ಯೆಯೇ ವಿರಳವಾಗುತ್ತಿರುವಾಗ ಶಾಲೆಗಳಲ್ಲಿ ಮಕ್ಕಳಿಗೆ ಕಥೆ , ಕಾದಂಬರಿ, ಅನುಭವ ಕಥನ ಹೀಗೆ ಮಕ್ಕಳ ನೈತಿಕ ಬೆಳವಣಿಗೆಗೆ ಪೂರಕವಾಗುವಂತಹ ಪುಸ್ತಕಗಳನ್ನು ಉಡುಗೊರೆಯಾಗಿ ನೀಡಿದರೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಇಂಬು ನೀಡಿದಂತಾಗುತ್ತದೆ. ಮಕ್ಕಳು ಪಠ್ಯದ ಜೊತೆಗೆ ಇತರ ಕೃತಿಗಳನ್ನು ಓದುವ ಹವ್ಯಾಸ ರೂಢಿಸಿಕೊಂಡಂತಾಗುತ್ತದೆ.

-ಎಂ.ಜೆ.ರುದ್ರಮೂರ್ತಿ, ಚಿತ್ರದುರ್ಗ

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

9 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

9 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

10 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

11 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

12 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

12 hours ago