ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ.
ಈ ನಾಯಿಗಳು ಗ್ರಾಮದ ಬೀದಿ ಬೀದಿಗಳಲ್ಲಿ ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ವೇಳೆ ಬೈಕ್ ಸವಾರರ ಮೇಲೆ ದಾಳಿ ಮಾಡುತ್ತಿವೆ. ಈ ವೇಳೆ ನಾಯಿಗಳಿಗೆ ಹೆದರಿ ಅನೇಕ ಬೈಕ್ ಸವಾರರು ವೇಗವಾಗಿ ಬೈಕ್ ಚಲಾಯಿಸಿ ನಿಯಂತ್ರಣ ತಪ್ಪಿ ಗಾಯಗೊಂಡಿರುವ ಉದಾಹರಣೆಗಳಿವೆ. ಅಲ್ಲದೆ ನಾಯಿಗಳು ಗುಂಪು ಗುಂಪಾಗಿ ಓಡಾಡುವುದರಿಂದ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಒಬ್ಬಂಟಿಯಾಗಿ ರಸ್ತೆಯಲ್ಲಿ ತಿರುಗಾಡಲು ಭಯಪಡುವಂತಾಗಿದೆ. ಅಲ್ಲದೆ ಇವು ಮಕ್ಕಳ ಮೇಲೂ ದಾಳಿಗೆ ಮುಂದಾಗುವ ಸಾಧ್ಯತೆ ಇದ್ದು, ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
-ಸಂಜು ಪುಟ್ಟೇಗೌಡ, ಅರೇನಹಳ್ಳಿ ಗ್ರಾಮ, ಪಿರಿಯಾಪಟ್ಟಣ ತಾ.
ಗೋಣಿಕೊಪ್ಪ : ಪಟ್ಟಣದಲ್ಲಿ ಬೀದಿನಾಯಿ ದಾಳಿಗೆ ಇಬ್ಬರು ವಿದ್ಯಾರ್ಥಿಗಳೂ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಈ ಘಟನೆಯಿಂದ ಎಚ್ಚೆತ್ತ ಸ್ಥಳೀಯರು ಮತ್ತಷ್ಟು…
ಹೊಸದಿಲ್ಲಿ : ಕನ್ನಡ ನಾಡು-ನುಡಿ ನಮ್ಮ ಹೆಮ್ಮೆ, ಕನ್ನಡ ಭೂಮಿ ನಮ್ಮ ಹೆಮ್ಮೆಯಾಗಿದೆ ಎಂದು ಪ್ರಧಾನಿ ನರೇಂದ್ರಮೋದಿ ಅವರು ಮುಕ್ತಕಂಠದಿಂದ…
ಮೈಸೂರು : ಕಾಂಗ್ರೆಸ್ ಪಕ್ಷ ಎಂದರೆ ಅದು ಅಹಿಂದ. ಅದನ್ನು ಅರಿಯದೆ ಅಹಿಂದ ಸಮಾವೇಶ ಮಾಡಿ ಕಾಂಗ್ರೆಸ್ ಪಕ್ಷವನ್ನು ಮುಚ್ಚಲು…
ಮೈಸೂರು : ಲಂಡನ್ನ ಬಂಕಿಂಗ್ ಹ್ಯಾಮ್ ಅರಮನೆಯಲ್ಲಿ ಎಲ್ಲರಿಗೂ ಪ್ರವೇಶ ಇಲ್ಲ. ದಿನಕ್ಕೆ ಇಂತಿಷ್ಟೇ ಜನ ಭೇಟಿ ನೀಡಬೇಕು ಎಂಬ…
ಬೆಂಗಳೂರು : ಬೆಂಗಳೂರಿನಲ್ಲಿ ಮಾದಕ ವಸ್ತುಗಳ ತಯಾರಿಕೆಯ ಘಟಕಗಳು ಪತ್ತೆಯಾಗಿರುವುದಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಿಡಿಮಿಡಿಯಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳನ್ನು…
ಬೆಂಗಳೂರು : ಮುಂದಿನ ಎರಡು ಮೂರು ತಿಂಗಳ ಒಳಗಾಗಿ ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯಿತಿ ಗಳಿಗೆ ಚುನಾವಣೆ ನಡೆಸಲು…