ಪಿರಿಯಾಪಟ್ಟಣ ತಾಲ್ಲೂಕಿನ ಅರೇನಹಳ್ಳಿ ಗ್ರಾಮದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ರಸ್ತೆಯಲ್ಲಿ ತಿರುಗಾಡಲು ಆತಂಕಪಡುವಂತಾಗಿದೆ.
ಈ ನಾಯಿಗಳು ಗ್ರಾಮದ ಬೀದಿ ಬೀದಿಗಳಲ್ಲಿ ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ವೇಳೆ ಬೈಕ್ ಸವಾರರ ಮೇಲೆ ದಾಳಿ ಮಾಡುತ್ತಿವೆ. ಈ ವೇಳೆ ನಾಯಿಗಳಿಗೆ ಹೆದರಿ ಅನೇಕ ಬೈಕ್ ಸವಾರರು ವೇಗವಾಗಿ ಬೈಕ್ ಚಲಾಯಿಸಿ ನಿಯಂತ್ರಣ ತಪ್ಪಿ ಗಾಯಗೊಂಡಿರುವ ಉದಾಹರಣೆಗಳಿವೆ. ಅಲ್ಲದೆ ನಾಯಿಗಳು ಗುಂಪು ಗುಂಪಾಗಿ ಓಡಾಡುವುದರಿಂದ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಒಬ್ಬಂಟಿಯಾಗಿ ರಸ್ತೆಯಲ್ಲಿ ತಿರುಗಾಡಲು ಭಯಪಡುವಂತಾಗಿದೆ. ಅಲ್ಲದೆ ಇವು ಮಕ್ಕಳ ಮೇಲೂ ದಾಳಿಗೆ ಮುಂದಾಗುವ ಸಾಧ್ಯತೆ ಇದ್ದು, ಸಂಬಂಧಪಟ್ಟವರು ಈ ಬಗ್ಗೆ ಗಮನಹರಿಸಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕಿದೆ.
-ಸಂಜು ಪುಟ್ಟೇಗೌಡ, ಅರೇನಹಳ್ಳಿ ಗ್ರಾಮ, ಪಿರಿಯಾಪಟ್ಟಣ ತಾ.
ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…
ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…
ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…
ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…
ಪಂಜು ಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…
ಕೇಶವ್ ಜೆಎಸ್ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…