ಓದುಗರ ಪತ್ರ
ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ ಪಟ್ಟು ಹಣ ಕೇಳುತ್ತಾರೆ.
ವಯಸ್ಸಾದವರನ್ನು ಕರೆದುಕೊಂಡು ಬಂದು ರೈಲು ನಿಲ್ದಾಣದ ಫ್ಲಾಟ್ ಫಾರಂನಿಂದ ವಿದ್ಯುತ್ ಚ್ಛಾಲಿತ ಬಗ್ಗಿ ವಾಹನದಲ್ಲಿ ಬಂದು ಆಪ್ ಆಧಾರಿತ ಆಟೋಗಳನ್ನು ಆನ್ಲೈನ್ನಲ್ಲಿ ಬುಕ್ ಮಾಡಿದರೆ ಆ ಆಟೋ ಚಾಲಕರು ರೈಲು ನಿಲ್ದಾಣಕ್ಕೆ ಬರಲು ನಿರಾಕರಿಸುತ್ತಾರೆ. ಇದಕ್ಕೆ ಕಾರಣ ಕೇಳಿದರೆ ರೈಲು ನಿಲ್ದಾಣದ ಆಟೋ ಚಾಲಕರು ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ, ಪೊಲೀಸರು ಸಾವಿರಾರು ರೂ. ದಂಡ ವಿಧಿಸುತ್ತಾರೆ ಎನ್ನುತ್ತಾರೆ. ವಯೋ ವೃದ್ಧರು ನಡೆಯುವುದೇ ಕಷ್ಟವಾಗಿರುವಾಗ ರೈಲು ನಿಲ್ದಾಣದ ಹೊರ ಭಾಗಕ್ಕೆ ಅವರನ್ನು ಅವರ ಅವಲಂಬಿತರು ಕರೆದುಕೊಂಡು ಹೋಗುವುದೇ ದುಸ್ತರವಾಗಿರುವುದರಿಂದ ಆಪ್ ಆಧಾರಿತ ಆಟೋ ಬುಕಿಂಗ್ ರದ್ದುಪಡಿಸಿ ಆಟೋ ನಿಲ್ದಾಣದ ಚಾಲಕರು ಕೇಳುವ ಒಂದೂವರೆ ಪಟ್ಟು ದುಬಾರಿ ಹಣ ನೀಡಿ ಮನೆಗೆ ತೆರಳುವುದು ಅನಿವಾರ್ಯವಾಗಿದೆ. ಅವರು ಕೇಳುವ ಮೊತ್ತ ರೈಲು ಪ್ರಯಾಣ ದರಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ.
ದುಡ್ಡು ಇದ್ದವರು ಕೇಳಿದಷ್ಟು ಹಣ ಕೊಟ್ಟು ತೆರಳುತ್ತಾರೆ. ಆದರೆ ದುಡ್ಡು ಇಲ್ಲದ ವಯಸ್ಸಾದವರು ಏನು ಮಾಡಬೇಕು? ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ನಗರ ಪೊಲೀಸ್ ಆಯುಕ್ತರು, ರೈಲ್ವೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಮೈಸೂರು: ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್…
ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…
ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್ ಎಂಬುವವರೇ ಮೃತಪಟ್ಟ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…
ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್ನ ಬೀದಿ ಬೀದಿಗಳಲ್ಲಿ ಬೆಂಕಿ…
ಪಾಂಡವಪುರ: ಸ್ಯಾಂಡಲ್ವುಡ್ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…