ಓದುಗರ ಪತ್ರ
ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ ಪಟ್ಟು ಹಣ ಕೇಳುತ್ತಾರೆ.
ವಯಸ್ಸಾದವರನ್ನು ಕರೆದುಕೊಂಡು ಬಂದು ರೈಲು ನಿಲ್ದಾಣದ ಫ್ಲಾಟ್ ಫಾರಂನಿಂದ ವಿದ್ಯುತ್ ಚ್ಛಾಲಿತ ಬಗ್ಗಿ ವಾಹನದಲ್ಲಿ ಬಂದು ಆಪ್ ಆಧಾರಿತ ಆಟೋಗಳನ್ನು ಆನ್ಲೈನ್ನಲ್ಲಿ ಬುಕ್ ಮಾಡಿದರೆ ಆ ಆಟೋ ಚಾಲಕರು ರೈಲು ನಿಲ್ದಾಣಕ್ಕೆ ಬರಲು ನಿರಾಕರಿಸುತ್ತಾರೆ. ಇದಕ್ಕೆ ಕಾರಣ ಕೇಳಿದರೆ ರೈಲು ನಿಲ್ದಾಣದ ಆಟೋ ಚಾಲಕರು ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ, ಪೊಲೀಸರು ಸಾವಿರಾರು ರೂ. ದಂಡ ವಿಧಿಸುತ್ತಾರೆ ಎನ್ನುತ್ತಾರೆ. ವಯೋ ವೃದ್ಧರು ನಡೆಯುವುದೇ ಕಷ್ಟವಾಗಿರುವಾಗ ರೈಲು ನಿಲ್ದಾಣದ ಹೊರ ಭಾಗಕ್ಕೆ ಅವರನ್ನು ಅವರ ಅವಲಂಬಿತರು ಕರೆದುಕೊಂಡು ಹೋಗುವುದೇ ದುಸ್ತರವಾಗಿರುವುದರಿಂದ ಆಪ್ ಆಧಾರಿತ ಆಟೋ ಬುಕಿಂಗ್ ರದ್ದುಪಡಿಸಿ ಆಟೋ ನಿಲ್ದಾಣದ ಚಾಲಕರು ಕೇಳುವ ಒಂದೂವರೆ ಪಟ್ಟು ದುಬಾರಿ ಹಣ ನೀಡಿ ಮನೆಗೆ ತೆರಳುವುದು ಅನಿವಾರ್ಯವಾಗಿದೆ. ಅವರು ಕೇಳುವ ಮೊತ್ತ ರೈಲು ಪ್ರಯಾಣ ದರಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ.
ದುಡ್ಡು ಇದ್ದವರು ಕೇಳಿದಷ್ಟು ಹಣ ಕೊಟ್ಟು ತೆರಳುತ್ತಾರೆ. ಆದರೆ ದುಡ್ಡು ಇಲ್ಲದ ವಯಸ್ಸಾದವರು ಏನು ಮಾಡಬೇಕು? ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ನಗರ ಪೊಲೀಸ್ ಆಯುಕ್ತರು, ರೈಲ್ವೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಓ.ಎಲ್.ನಾಗಭೂಷಣ ಸ್ವಾಮಿ ‘ಹಾಡು-ಪಾಡು ರಾಮು’ ಅಂತಲೇ ಪರಿಚಯವಾಗಿರುವ ರಾಮು ನೆನಪು ಮಾತ್ರವಾಗಿ ಉಳಿದು ಇವತ್ತಿಗೆ ಮೂರು ವರ್ಷ. ರಾಮು ಮಹಾ…
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…