ಓದುಗರ ಪತ್ರ
ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ ಪಟ್ಟು ಹಣ ಕೇಳುತ್ತಾರೆ.
ವಯಸ್ಸಾದವರನ್ನು ಕರೆದುಕೊಂಡು ಬಂದು ರೈಲು ನಿಲ್ದಾಣದ ಫ್ಲಾಟ್ ಫಾರಂನಿಂದ ವಿದ್ಯುತ್ ಚ್ಛಾಲಿತ ಬಗ್ಗಿ ವಾಹನದಲ್ಲಿ ಬಂದು ಆಪ್ ಆಧಾರಿತ ಆಟೋಗಳನ್ನು ಆನ್ಲೈನ್ನಲ್ಲಿ ಬುಕ್ ಮಾಡಿದರೆ ಆ ಆಟೋ ಚಾಲಕರು ರೈಲು ನಿಲ್ದಾಣಕ್ಕೆ ಬರಲು ನಿರಾಕರಿಸುತ್ತಾರೆ. ಇದಕ್ಕೆ ಕಾರಣ ಕೇಳಿದರೆ ರೈಲು ನಿಲ್ದಾಣದ ಆಟೋ ಚಾಲಕರು ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ, ಪೊಲೀಸರು ಸಾವಿರಾರು ರೂ. ದಂಡ ವಿಧಿಸುತ್ತಾರೆ ಎನ್ನುತ್ತಾರೆ. ವಯೋ ವೃದ್ಧರು ನಡೆಯುವುದೇ ಕಷ್ಟವಾಗಿರುವಾಗ ರೈಲು ನಿಲ್ದಾಣದ ಹೊರ ಭಾಗಕ್ಕೆ ಅವರನ್ನು ಅವರ ಅವಲಂಬಿತರು ಕರೆದುಕೊಂಡು ಹೋಗುವುದೇ ದುಸ್ತರವಾಗಿರುವುದರಿಂದ ಆಪ್ ಆಧಾರಿತ ಆಟೋ ಬುಕಿಂಗ್ ರದ್ದುಪಡಿಸಿ ಆಟೋ ನಿಲ್ದಾಣದ ಚಾಲಕರು ಕೇಳುವ ಒಂದೂವರೆ ಪಟ್ಟು ದುಬಾರಿ ಹಣ ನೀಡಿ ಮನೆಗೆ ತೆರಳುವುದು ಅನಿವಾರ್ಯವಾಗಿದೆ. ಅವರು ಕೇಳುವ ಮೊತ್ತ ರೈಲು ಪ್ರಯಾಣ ದರಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ.
ದುಡ್ಡು ಇದ್ದವರು ಕೇಳಿದಷ್ಟು ಹಣ ಕೊಟ್ಟು ತೆರಳುತ್ತಾರೆ. ಆದರೆ ದುಡ್ಡು ಇಲ್ಲದ ವಯಸ್ಸಾದವರು ಏನು ಮಾಡಬೇಕು? ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ನಗರ ಪೊಲೀಸ್ ಆಯುಕ್ತರು, ರೈಲ್ವೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…
ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…
ಬೆಂಗಳೂರು: ಪ್ರಸಕ್ತ ಎಸ್ಎಸ್ಎಲ್ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…
ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆಗುವುದು ಫಿಕ್ಸ್ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…
ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…
ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…