ಓದುಗರ ಪತ್ರ
ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ ಪಟ್ಟು ಹಣ ಕೇಳುತ್ತಾರೆ.
ವಯಸ್ಸಾದವರನ್ನು ಕರೆದುಕೊಂಡು ಬಂದು ರೈಲು ನಿಲ್ದಾಣದ ಫ್ಲಾಟ್ ಫಾರಂನಿಂದ ವಿದ್ಯುತ್ ಚ್ಛಾಲಿತ ಬಗ್ಗಿ ವಾಹನದಲ್ಲಿ ಬಂದು ಆಪ್ ಆಧಾರಿತ ಆಟೋಗಳನ್ನು ಆನ್ಲೈನ್ನಲ್ಲಿ ಬುಕ್ ಮಾಡಿದರೆ ಆ ಆಟೋ ಚಾಲಕರು ರೈಲು ನಿಲ್ದಾಣಕ್ಕೆ ಬರಲು ನಿರಾಕರಿಸುತ್ತಾರೆ. ಇದಕ್ಕೆ ಕಾರಣ ಕೇಳಿದರೆ ರೈಲು ನಿಲ್ದಾಣದ ಆಟೋ ಚಾಲಕರು ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ, ಪೊಲೀಸರು ಸಾವಿರಾರು ರೂ. ದಂಡ ವಿಧಿಸುತ್ತಾರೆ ಎನ್ನುತ್ತಾರೆ. ವಯೋ ವೃದ್ಧರು ನಡೆಯುವುದೇ ಕಷ್ಟವಾಗಿರುವಾಗ ರೈಲು ನಿಲ್ದಾಣದ ಹೊರ ಭಾಗಕ್ಕೆ ಅವರನ್ನು ಅವರ ಅವಲಂಬಿತರು ಕರೆದುಕೊಂಡು ಹೋಗುವುದೇ ದುಸ್ತರವಾಗಿರುವುದರಿಂದ ಆಪ್ ಆಧಾರಿತ ಆಟೋ ಬುಕಿಂಗ್ ರದ್ದುಪಡಿಸಿ ಆಟೋ ನಿಲ್ದಾಣದ ಚಾಲಕರು ಕೇಳುವ ಒಂದೂವರೆ ಪಟ್ಟು ದುಬಾರಿ ಹಣ ನೀಡಿ ಮನೆಗೆ ತೆರಳುವುದು ಅನಿವಾರ್ಯವಾಗಿದೆ. ಅವರು ಕೇಳುವ ಮೊತ್ತ ರೈಲು ಪ್ರಯಾಣ ದರಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ.
ದುಡ್ಡು ಇದ್ದವರು ಕೇಳಿದಷ್ಟು ಹಣ ಕೊಟ್ಟು ತೆರಳುತ್ತಾರೆ. ಆದರೆ ದುಡ್ಡು ಇಲ್ಲದ ವಯಸ್ಸಾದವರು ಏನು ಮಾಡಬೇಕು? ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ನಗರ ಪೊಲೀಸ್ ಆಯುಕ್ತರು, ರೈಲ್ವೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…