ಓದುಗರ ಪತ್ರ
ಮೈಸೂರು ರೈಲು ನಿಲ್ದಾಣದಲ್ಲಿ ಆಟೋಚಾಲಕರ ದುರ್ವರ್ತನೆಯಿಂದಾಗಿ, ದೂರದ ಊರುಗಳಿಂದ ಬರುವ ಪ್ರಯಾಣಿಕರು ಮನೆಗೆ ತೆರಳಲು ತೀವ್ರ ತೊಂದರೆಯಾಗುತ್ತದೆ. ಆಟೋ ಚಾಲಕರು ಮೀಟರ್ ಹಾಕುವುದಿಲ್ಲ. ನಿಗದಿತ ದರಕ್ಕಿಂತಲೂ ಒಂದೂವರೆ ಪಟ್ಟು ಹಣ ಕೇಳುತ್ತಾರೆ.
ವಯಸ್ಸಾದವರನ್ನು ಕರೆದುಕೊಂಡು ಬಂದು ರೈಲು ನಿಲ್ದಾಣದ ಫ್ಲಾಟ್ ಫಾರಂನಿಂದ ವಿದ್ಯುತ್ ಚ್ಛಾಲಿತ ಬಗ್ಗಿ ವಾಹನದಲ್ಲಿ ಬಂದು ಆಪ್ ಆಧಾರಿತ ಆಟೋಗಳನ್ನು ಆನ್ಲೈನ್ನಲ್ಲಿ ಬುಕ್ ಮಾಡಿದರೆ ಆ ಆಟೋ ಚಾಲಕರು ರೈಲು ನಿಲ್ದಾಣಕ್ಕೆ ಬರಲು ನಿರಾಕರಿಸುತ್ತಾರೆ. ಇದಕ್ಕೆ ಕಾರಣ ಕೇಳಿದರೆ ರೈಲು ನಿಲ್ದಾಣದ ಆಟೋ ಚಾಲಕರು ನಮ್ಮ ಮೇಲೆ ಹಲ್ಲೆ ಮಾಡುತ್ತಾರೆ, ಪೊಲೀಸರು ಸಾವಿರಾರು ರೂ. ದಂಡ ವಿಧಿಸುತ್ತಾರೆ ಎನ್ನುತ್ತಾರೆ. ವಯೋ ವೃದ್ಧರು ನಡೆಯುವುದೇ ಕಷ್ಟವಾಗಿರುವಾಗ ರೈಲು ನಿಲ್ದಾಣದ ಹೊರ ಭಾಗಕ್ಕೆ ಅವರನ್ನು ಅವರ ಅವಲಂಬಿತರು ಕರೆದುಕೊಂಡು ಹೋಗುವುದೇ ದುಸ್ತರವಾಗಿರುವುದರಿಂದ ಆಪ್ ಆಧಾರಿತ ಆಟೋ ಬುಕಿಂಗ್ ರದ್ದುಪಡಿಸಿ ಆಟೋ ನಿಲ್ದಾಣದ ಚಾಲಕರು ಕೇಳುವ ಒಂದೂವರೆ ಪಟ್ಟು ದುಬಾರಿ ಹಣ ನೀಡಿ ಮನೆಗೆ ತೆರಳುವುದು ಅನಿವಾರ್ಯವಾಗಿದೆ. ಅವರು ಕೇಳುವ ಮೊತ್ತ ರೈಲು ಪ್ರಯಾಣ ದರಕ್ಕಿಂತಲೂ ನಾಲ್ಕು ಪಟ್ಟು ಹೆಚ್ಚಾಗಿರುತ್ತದೆ.
ದುಡ್ಡು ಇದ್ದವರು ಕೇಳಿದಷ್ಟು ಹಣ ಕೊಟ್ಟು ತೆರಳುತ್ತಾರೆ. ಆದರೆ ದುಡ್ಡು ಇಲ್ಲದ ವಯಸ್ಸಾದವರು ಏನು ಮಾಡಬೇಕು? ರೈಲು ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ನಗರ ಪೊಲೀಸ್ ಆಯುಕ್ತರು, ರೈಲ್ವೆ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
-ಶಿವಮೊಗ್ಗ ನಾ. ದಿನೇಶ್ ಅಡಿಗ, ಮೈಸೂರು
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…
ನವೀನ್ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…