Andolana originals

ಓದುಗರ ಪತ್ರ: ಚಿನ್ನ , ಬೆಳ್ಳಿ ದರ ಏರಿಕೆಗೆ ಕಡಿವಾಣ ಹಾಕಿ

ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಹಾಗೂ ಆಪತ್ಕಾಲದಲ್ಲಿ ಚಿನ್ನ ಉಪಯೋಗಕ್ಕೆ ಬರುತ್ತದೆ.

ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನ ಯಾರೂ ಊಹಿಸದ ರೀತಿಯಲ್ಲಿ ತನ್ನ ಬೆಲೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಜನವರಿಯಿಂದ ಮೇವರೆಗೂ ಮದುವೆ ಸಮಾರಂಭಗಳು ನಡೆಯಲಿದ್ದು, ಈ ಸಂದರ್ಭದಲ್ಲಿ ಚಿನ್ನಾಭರಣಗಳ ಬೆಲೆ ಹೆಚ್ಚಳವಾಗುತ್ತಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬೆಳ್ಳಿ ಕೂಡ ಪೂಜನೀಯ ಲೋಹವಾಗಿ ಬಳಕೆಯಲ್ಲಿದ್ದು, ಬೆಳ್ಳಿಯ ಅನೇಕ ಪರಿಕರಗಳನ್ನು ದಿನಬಳಕೆಯಲ್ಲಿ ಜನ ಬಳಸುತ್ತಿದ್ದಾರೆ. ಬೆಳ್ಳಿಯ ಕಾಲ್ಗೆಜ್ಜೆ, ಬೆಳ್ಳಿಯ ಆಭರಣಗಳು, ಪೂಜಾ ಸಾಮಗ್ರಿಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಚಿನ್ನದಂತೆ ಬೆಳ್ಳಿಯ ಬೆಲೆ ಕೂಡ ದಿನನಿತ್ಯ ಏರಿಕೆಯಗುತ್ತಿದೆ.

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಈ ಚಿನ್ನ ಹಾಗೂ ಬೆಳ್ಳಿಯ ದರಗಳಿಗೆ ಕಡಿವಾಣ ಹಾಕಿ, ಬಡ ಹಾಗೂ ಮಧ್ಯಮ ವರ್ಗದ ಜನರ ಕೈಗೆ ಎಟುಕುವ ನಿಟ್ಟಿನಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳಲ್ಲಿ ಸ್ಥಿರತೆಯನ್ನು ಕಾಪಾಡುವುದು ಅವಶ್ಯವಾಗಿದೆ.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಉಡುತೊರೆ ಹಳ್ಳ ಜಲಾಶಯದ 490 ಕೋಟಿ ವೆಚ್ಚದ ಕಾಮಗಾರಿಗೆ ಅನುಮೋದನೆ: ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದ ಪುಟಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…

13 hours ago

ಹನೂರು| ಕುಡಿಯುವ ನೀರಿನ ಸಮಸ್ಯೆ ಉದ್ಭವ: ಅಧಿಕಾರಿಗಳ ವಿರುದ್ಧವೇ ದೂರು ನೀಡಿದ ಗ್ರಾಮಸ್ಥರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…

13 hours ago

ಯಾವುದೇ ಕಾರಣಕ್ಕೂ ಟಿ.ನರಸೀಪುರ ರೇಷ್ಮೆ ಕಾರ್ಖಾನೆ ಮುಚ್ಚಲ್ಲ: ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…

14 hours ago

ಹಾಸನ: ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…

14 hours ago

ನೀರು ಕುಡಿಯಲು ಹೋಗಿ ಕೆಸರಿನಲ್ಲಿ ಸಿಲುಕಿದ ಸಾರಂಗ: ಅರಣ್ಯ ಇಲಾಖೆಯಿಂದ ರಕ್ಷಣೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…

14 hours ago

ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಯ ಮುಂಚೂಣಿಯಲ್ಲಿದೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…

14 hours ago