ಓದುಗರ ಪತ್ರ
ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಹಾಗೂ ಆಪತ್ಕಾಲದಲ್ಲಿ ಚಿನ್ನ ಉಪಯೋಗಕ್ಕೆ ಬರುತ್ತದೆ.
ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನ ಯಾರೂ ಊಹಿಸದ ರೀತಿಯಲ್ಲಿ ತನ್ನ ಬೆಲೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಜನವರಿಯಿಂದ ಮೇವರೆಗೂ ಮದುವೆ ಸಮಾರಂಭಗಳು ನಡೆಯಲಿದ್ದು, ಈ ಸಂದರ್ಭದಲ್ಲಿ ಚಿನ್ನಾಭರಣಗಳ ಬೆಲೆ ಹೆಚ್ಚಳವಾಗುತ್ತಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬೆಳ್ಳಿ ಕೂಡ ಪೂಜನೀಯ ಲೋಹವಾಗಿ ಬಳಕೆಯಲ್ಲಿದ್ದು, ಬೆಳ್ಳಿಯ ಅನೇಕ ಪರಿಕರಗಳನ್ನು ದಿನಬಳಕೆಯಲ್ಲಿ ಜನ ಬಳಸುತ್ತಿದ್ದಾರೆ. ಬೆಳ್ಳಿಯ ಕಾಲ್ಗೆಜ್ಜೆ, ಬೆಳ್ಳಿಯ ಆಭರಣಗಳು, ಪೂಜಾ ಸಾಮಗ್ರಿಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಚಿನ್ನದಂತೆ ಬೆಳ್ಳಿಯ ಬೆಲೆ ಕೂಡ ದಿನನಿತ್ಯ ಏರಿಕೆಯಗುತ್ತಿದೆ.
ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಈ ಚಿನ್ನ ಹಾಗೂ ಬೆಳ್ಳಿಯ ದರಗಳಿಗೆ ಕಡಿವಾಣ ಹಾಕಿ, ಬಡ ಹಾಗೂ ಮಧ್ಯಮ ವರ್ಗದ ಜನರ ಕೈಗೆ ಎಟುಕುವ ನಿಟ್ಟಿನಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳಲ್ಲಿ ಸ್ಥಿರತೆಯನ್ನು ಕಾಪಾಡುವುದು ಅವಶ್ಯವಾಗಿದೆ.
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…
ನಗರ ಪ್ರದೇಶಗಳ ಹೋಟೆಲ್ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…
ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…
ಪಂಜು ಗಂಗೊಳ್ಳಿ ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…