Andolana originals

ಓದುಗರ ಪತ್ರ: ಚಿನ್ನ , ಬೆಳ್ಳಿ ದರ ಏರಿಕೆಗೆ ಕಡಿವಾಣ ಹಾಕಿ

ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಹಾಗೂ ಆಪತ್ಕಾಲದಲ್ಲಿ ಚಿನ್ನ ಉಪಯೋಗಕ್ಕೆ ಬರುತ್ತದೆ.

ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನ ಯಾರೂ ಊಹಿಸದ ರೀತಿಯಲ್ಲಿ ತನ್ನ ಬೆಲೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಜನವರಿಯಿಂದ ಮೇವರೆಗೂ ಮದುವೆ ಸಮಾರಂಭಗಳು ನಡೆಯಲಿದ್ದು, ಈ ಸಂದರ್ಭದಲ್ಲಿ ಚಿನ್ನಾಭರಣಗಳ ಬೆಲೆ ಹೆಚ್ಚಳವಾಗುತ್ತಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬೆಳ್ಳಿ ಕೂಡ ಪೂಜನೀಯ ಲೋಹವಾಗಿ ಬಳಕೆಯಲ್ಲಿದ್ದು, ಬೆಳ್ಳಿಯ ಅನೇಕ ಪರಿಕರಗಳನ್ನು ದಿನಬಳಕೆಯಲ್ಲಿ ಜನ ಬಳಸುತ್ತಿದ್ದಾರೆ. ಬೆಳ್ಳಿಯ ಕಾಲ್ಗೆಜ್ಜೆ, ಬೆಳ್ಳಿಯ ಆಭರಣಗಳು, ಪೂಜಾ ಸಾಮಗ್ರಿಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಚಿನ್ನದಂತೆ ಬೆಳ್ಳಿಯ ಬೆಲೆ ಕೂಡ ದಿನನಿತ್ಯ ಏರಿಕೆಯಗುತ್ತಿದೆ.

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಈ ಚಿನ್ನ ಹಾಗೂ ಬೆಳ್ಳಿಯ ದರಗಳಿಗೆ ಕಡಿವಾಣ ಹಾಕಿ, ಬಡ ಹಾಗೂ ಮಧ್ಯಮ ವರ್ಗದ ಜನರ ಕೈಗೆ ಎಟುಕುವ ನಿಟ್ಟಿನಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳಲ್ಲಿ ಸ್ಥಿರತೆಯನ್ನು ಕಾಪಾಡುವುದು ಅವಶ್ಯವಾಗಿದೆ.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಅಂತ್ಯ

5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್)…

4 hours ago

ಮೈಸೂರು | ದಸರಾ ವೇಳೆಗೆ ಫುಟ್‌ಪಾತ್‌ಗಳ ದುರಸ್ತಿಗೆ ಸೂಚನೆ

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…

4 hours ago

ಪ.ಬಂಗಾಳ | ಬೆಂಕಿ ಅವಘಡದಲ್ಲಿ ಏಳು ಮಂದಿ ಸಾವು, ಹಲವರು ಗಂಭೀರ

ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…

5 hours ago

ಯಳಂದೂರು | ಚಿರತೆ ದಾಳಿಗೆ ಕರು ಬಲಿ

ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…

6 hours ago

ಸಿಡಬ್ಲ್ಯುಎಂಎ ಆದೇಶ ಪಾಲಿಸಿ ; ಕರ್ನಾಟಕಕ್ಕೆ ಸುಪ್ರೀಂ ಸೂಚನೆ

ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…

7 hours ago

ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಎಚ್1ಎನ್1‌ ಸೋಂಕು ದೃಢ

ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…

7 hours ago