Andolana originals

ಓದುಗರ ಪತ್ರ: ಚಿನ್ನ , ಬೆಳ್ಳಿ ದರ ಏರಿಕೆಗೆ ಕಡಿವಾಣ ಹಾಕಿ

ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಹಾಗೂ ಆಪತ್ಕಾಲದಲ್ಲಿ ಚಿನ್ನ ಉಪಯೋಗಕ್ಕೆ ಬರುತ್ತದೆ.

ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನ ಯಾರೂ ಊಹಿಸದ ರೀತಿಯಲ್ಲಿ ತನ್ನ ಬೆಲೆಯನ್ನು ಹೆಚ್ಚಿಸಿಕೊಳ್ಳುತ್ತಿದೆ. ಜನವರಿಯಿಂದ ಮೇವರೆಗೂ ಮದುವೆ ಸಮಾರಂಭಗಳು ನಡೆಯಲಿದ್ದು, ಈ ಸಂದರ್ಭದಲ್ಲಿ ಚಿನ್ನಾಭರಣಗಳ ಬೆಲೆ ಹೆಚ್ಚಳವಾಗುತ್ತಿರುವುದು ಬಡ ಹಾಗೂ ಮಧ್ಯಮ ವರ್ಗದ ಜನರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಬೆಳ್ಳಿ ಕೂಡ ಪೂಜನೀಯ ಲೋಹವಾಗಿ ಬಳಕೆಯಲ್ಲಿದ್ದು, ಬೆಳ್ಳಿಯ ಅನೇಕ ಪರಿಕರಗಳನ್ನು ದಿನಬಳಕೆಯಲ್ಲಿ ಜನ ಬಳಸುತ್ತಿದ್ದಾರೆ. ಬೆಳ್ಳಿಯ ಕಾಲ್ಗೆಜ್ಜೆ, ಬೆಳ್ಳಿಯ ಆಭರಣಗಳು, ಪೂಜಾ ಸಾಮಗ್ರಿಗಳನ್ನು ಗ್ರಾಹಕರು ಖರೀದಿಸುತ್ತಿದ್ದಾರೆ. ಚಿನ್ನದಂತೆ ಬೆಳ್ಳಿಯ ಬೆಲೆ ಕೂಡ ದಿನನಿತ್ಯ ಏರಿಕೆಯಗುತ್ತಿದೆ.

ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಈ ಚಿನ್ನ ಹಾಗೂ ಬೆಳ್ಳಿಯ ದರಗಳಿಗೆ ಕಡಿವಾಣ ಹಾಕಿ, ಬಡ ಹಾಗೂ ಮಧ್ಯಮ ವರ್ಗದ ಜನರ ಕೈಗೆ ಎಟುಕುವ ನಿಟ್ಟಿನಲ್ಲಿ ಚಿನ್ನ ಹಾಗೂ ಬೆಳ್ಳಿಯ ದರಗಳಲ್ಲಿ ಸ್ಥಿರತೆಯನ್ನು ಕಾಪಾಡುವುದು ಅವಶ್ಯವಾಗಿದೆ.

 -ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ | ನಟೋರಿಯಸ್ ರೌಡಿಶೀಟರ್‌ ಬರ್ಬರ ಹತ್ಯೆ

ಶ್ರೀರಂಗಪಟ್ಟಣ  : ತಾಲೂಕಿನ ಪಾಲಹಳ್ಳಿ ಲಕ್ಷ್ಮೀಪುರ ರಸ್ತೆಯಲ್ಲಿ ಮೈಸೂರಿನ ನಟೋರಿಯಸ್ ರೌಡಿಶೀಟರ್ ನ ಬರ್ಬರ ಹತ್ಯೆ ಮಾಡಿರುವ ಘಟನೆ ನಡೆದಿದೆ.…

4 hours ago

ಅರ್ಜುನ ಆನೆ ಸ್ಮಾರಕ ಲೋಕರ್ಪಣೆ

ಹಾಸನ : ಯಸಳೂರಿನ ದಬ್ಬಳಿಕಟ್ಟೆ ನೆಡುತೋಪಿನಲ್ಲಿ ನಿರ್ಮಿಸಿರುವ ಹುತಾತ್ಮ ಅರ್ಜುನ ಆನೆಯ 650 ಕೆ.ಜಿ. ತೂಕದ ಸುಂದರ ಪ್ರತಿಮೆಯ ಸ್ಮಾರಕವನ್ನು…

4 hours ago

ಅಮೃತ್‌ಸರ, ಜಲಂಧರ್‌ನಲ್ಲಿ ಸ್ಫೋಟ : ಪಂಜಾಬ್‌ನಲ್ಲಿ ಕಟ್ಟೆಚ್ಚರ

ಅಮೃತ್‌ಸರ : ಪಂಜಾಬ್‌ನ ಅಮೃತ್‌ಸರ್ ಮತ್ತು ಜಲಂಧರ್‌ನ ಹೈ ಸೆಕ್ಯೂರಿಟಿ ವಲಯಗಳ ಬಳಿ ಮಂಗಳವಾರ ಕೆಲವೇ ಗಂಟೆಗಳ ಅಂತರದಲ್ಲಿ ಸ್ಛೋಟ…

4 hours ago

ದುಬಾರೆಯಲ್ಲಿ ತೂಗು ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ ಈಶ್ವರ ಖಂಡ್ರೆ

7.3 ಕೋಟಿ ರೂ. ವೆಚ್ಚದಲ್ಲಿ ತೂಗು ಸೇತುವೆ ನಿರ್ಮಾಣ ಶೀಘ್ರ :ಈಶ್ವರ ಖಂಡ್ರೆ ದುಬಾರೆ :  ವನ್ಯಜೀವಿಗಳ ಸಂಖ್ಯೆ ದಿನದಿಂದ…

5 hours ago

ಒಳಮೀಸಲಾತಿ ಜಾರಿ ಸರ್ಕಾರದ ಐತಿಹಾಸಿಕ ತೀರ್ಮಾನ : ಸಿಎಂ ಪ್ರತಿಪಾದನೆ

ಮೈಸೂರು : ರಾಜ್ಯದಲ್ಲಿ ಒಳಮೀಸಲಾತಿ ಜಾರಿಗೊಳಿಸುವಲ್ಲಿ ಕಾಂಗ್ರೆಸ್‌ ಸಫಲವಾಗಿದ್ದು, ಇದು ಸರ್ಕಾರದ ಐತಿಹಾಸಿಕ ತೀರ್ಮಾನವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.…

5 hours ago

ಮೈಸೂರು | ಉದ್ದೇಶಿತ ಮೇಲ್ಸೇತುವೆ ಪ್ರದೇಶಕ್ಕೆ ಈಶ್ವರ ಖಂಡ್ರೆ ಭೇಟಿ, ಪರಿಶೀಲನೆ

ಮೈಸೂರು : ಮೈಸೂರಿನ ಸಿದ್ದಿಕಿ ನಗರ, ಮಣಿಪಾಲ್ ಆಸ್ಪತ್ರೆ ವೃತ್ತದ ಬಳಿ ರಾ.ಹೆ.275ರಲ್ಲಿ ಉದ್ದೇಶಿತ ಮೇಲ್ಸೇತುವೆ ಸ್ಥಳಕ್ಕೆ ಅರಣ್ಯ, ಜೀವಿಶಾಸ್ತ್ರ…

5 hours ago