ರಾಜ್ಯಾದ್ಯಂತ ಇ -ಖಾತಾ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ವಿವಿಧ ನಗರ ಪಾಲಿಕೆಗಳು, ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಇ- ಖಾತೆಯನ್ನು ಮಾಡಿ ಕೊಡಲಾಗುತ್ತಿದೆ. ಆದರೆ ಇ -ಖಾತೆಗಳನ್ನು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿ ಹಾಗೂ ಇತರ ನೌಕರ ವರ್ಗದವರಿಗೆ ಲಂಚ ಕೊಡುವುದು ಅನಿವಾರ್ಯ ಎನ್ನುವಂತಾಗಿದೆ. ಇದರ ಜೊತೆಗೆ ಇ- ಖಾತೆಗಳನ್ನು ಮಾಡಿಸಿಕೊಡುವುದಾಗಿ ದಲ್ಲಾಳಿಗಳು ಆಸ್ತಿ ಮಾಲೀಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದಾರೆ.
ಸರ್ಕಾರದ ಅನೇಕ ಯೋಜನೆಗಳು ಪರೋಕ್ಷವಾಗಿ ಲಂಚಕೋರ ನೌಕರ ವರ್ಗದವರಿಗೆ ವರದಾನವಾಗಿ ಪರಿಣಮಿಸಿರುವುದು ದುರದೃಷ್ಟಕರ ಸಂಗತಿ. ಇ -ಖಾತಾ ಅರ್ಜಿ ಸಲ್ಲಿಕೆ ಕೆಲವು ಕಡೆ ಆನ್ ಲೈನ್ ಆಗಿರುವುದು ಒಳ್ಳೆಯ ಬೆಳವಣಿಗೆಯಾದರೂ ಲಂಚಕೋರ ಅಧಿಕಾರಿಗಳು ಹಾಗೂ ನೌಕರ ವರ್ಗದವರು ಬೇರೆ ಬೇರೆ ದಾರಿಗಳನ್ನು ಹುಡುಕಿಕೊಂಡಿರುತ್ತಾರೆ. ಕಂದಾಯ ಸಚಿವರು ಕೂಡಲೇ ಲಂಚದ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು




