ಓದುಗರ ಪತ್ರ
ರಾಜ್ಯಾದ್ಯಂತ ಇ -ಖಾತಾ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ವಿವಿಧ ನಗರ ಪಾಲಿಕೆಗಳು, ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಇ- ಖಾತೆಯನ್ನು ಮಾಡಿ ಕೊಡಲಾಗುತ್ತಿದೆ. ಆದರೆ ಇ -ಖಾತೆಗಳನ್ನು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿ ಹಾಗೂ ಇತರ ನೌಕರ ವರ್ಗದವರಿಗೆ ಲಂಚ ಕೊಡುವುದು ಅನಿವಾರ್ಯ ಎನ್ನುವಂತಾಗಿದೆ. ಇದರ ಜೊತೆಗೆ ಇ- ಖಾತೆಗಳನ್ನು ಮಾಡಿಸಿಕೊಡುವುದಾಗಿ ದಲ್ಲಾಳಿಗಳು ಆಸ್ತಿ ಮಾಲೀಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದಾರೆ.
ಸರ್ಕಾರದ ಅನೇಕ ಯೋಜನೆಗಳು ಪರೋಕ್ಷವಾಗಿ ಲಂಚಕೋರ ನೌಕರ ವರ್ಗದವರಿಗೆ ವರದಾನವಾಗಿ ಪರಿಣಮಿಸಿರುವುದು ದುರದೃಷ್ಟಕರ ಸಂಗತಿ. ಇ -ಖಾತಾ ಅರ್ಜಿ ಸಲ್ಲಿಕೆ ಕೆಲವು ಕಡೆ ಆನ್ ಲೈನ್ ಆಗಿರುವುದು ಒಳ್ಳೆಯ ಬೆಳವಣಿಗೆಯಾದರೂ ಲಂಚಕೋರ ಅಧಿಕಾರಿಗಳು ಹಾಗೂ ನೌಕರ ವರ್ಗದವರು ಬೇರೆ ಬೇರೆ ದಾರಿಗಳನ್ನು ಹುಡುಕಿಕೊಂಡಿರುತ್ತಾರೆ. ಕಂದಾಯ ಸಚಿವರು ಕೂಡಲೇ ಲಂಚದ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಮೈಸೂರು : ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ವಾಸವಾಗಿರುವ ಕುಟುಂಬಗಳಿಗೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳನ್ನು ತಲುಪಿಸಿ, ಅವರನ್ನು ಆರ್ಥಿಕವಾಗಿ ಸಬಲರನ್ನಾಗಿ…
ಬೆಳಗಾವಿ: ಗ್ಯಾರಂಟಿ ಯೋಜನೆಗಳಿಂದಲೇ ರಾಜ್ಯದ ಜನತೆಯ ಮನಸ್ಸನ್ನು ಗೆಲ್ಲಲು ಸಾಧ್ಯವಿಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕೆಲಸಗಳು ಕೂಡ…
ಬೆಂಗಳೂರು: ನಾಳೆ ದರ್ಶನ್ ಅಭಿನಯದ ಡೆವಿಲ್ ಸಿನಿಮಾ ಬಿಡುಗಡೆ ಆಗುತ್ತಿರುವ ಹಿನ್ನೆಲೆಯಲ್ಲಿ ಡಿ ಬಾಸ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.…
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್ ಸರ್ಕಾರ ಪರಿಹಾರ ನೀಡಿಲ್ಲ, ಮನೆ…
ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…