ಓದುಗರ ಪತ್ರ
ರಾಜ್ಯಾದ್ಯಂತ ಇ -ಖಾತಾ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ವಿವಿಧ ನಗರ ಪಾಲಿಕೆಗಳು, ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಇ- ಖಾತೆಯನ್ನು ಮಾಡಿ ಕೊಡಲಾಗುತ್ತಿದೆ. ಆದರೆ ಇ -ಖಾತೆಗಳನ್ನು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿ ಹಾಗೂ ಇತರ ನೌಕರ ವರ್ಗದವರಿಗೆ ಲಂಚ ಕೊಡುವುದು ಅನಿವಾರ್ಯ ಎನ್ನುವಂತಾಗಿದೆ. ಇದರ ಜೊತೆಗೆ ಇ- ಖಾತೆಗಳನ್ನು ಮಾಡಿಸಿಕೊಡುವುದಾಗಿ ದಲ್ಲಾಳಿಗಳು ಆಸ್ತಿ ಮಾಲೀಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದಾರೆ.
ಸರ್ಕಾರದ ಅನೇಕ ಯೋಜನೆಗಳು ಪರೋಕ್ಷವಾಗಿ ಲಂಚಕೋರ ನೌಕರ ವರ್ಗದವರಿಗೆ ವರದಾನವಾಗಿ ಪರಿಣಮಿಸಿರುವುದು ದುರದೃಷ್ಟಕರ ಸಂಗತಿ. ಇ -ಖಾತಾ ಅರ್ಜಿ ಸಲ್ಲಿಕೆ ಕೆಲವು ಕಡೆ ಆನ್ ಲೈನ್ ಆಗಿರುವುದು ಒಳ್ಳೆಯ ಬೆಳವಣಿಗೆಯಾದರೂ ಲಂಚಕೋರ ಅಧಿಕಾರಿಗಳು ಹಾಗೂ ನೌಕರ ವರ್ಗದವರು ಬೇರೆ ಬೇರೆ ದಾರಿಗಳನ್ನು ಹುಡುಕಿಕೊಂಡಿರುತ್ತಾರೆ. ಕಂದಾಯ ಸಚಿವರು ಕೂಡಲೇ ಲಂಚದ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…