ಓದುಗರ ಪತ್ರ
ರಾಜ್ಯಾದ್ಯಂತ ಇ -ಖಾತಾ ಅಭಿಯಾನ ಬಿರುಸಿನಿಂದ ನಡೆಯುತ್ತಿದೆ. ವಿವಿಧ ನಗರ ಪಾಲಿಕೆಗಳು, ತಾಲ್ಲೂಕು ಮತ್ತು ಪಟ್ಟಣ ಪಂಚಾಯಿತಿ ಹಾಗೂ ಇತರೆ ಸ್ಥಳೀಯ ಸಂಸ್ಥೆಗಳಲ್ಲಿ ಇ- ಖಾತೆಯನ್ನು ಮಾಡಿ ಕೊಡಲಾಗುತ್ತಿದೆ. ಆದರೆ ಇ -ಖಾತೆಗಳನ್ನು ಮಾಡಿಕೊಡಲು ಸಂಬಂಧಪಟ್ಟ ಅಧಿಕಾರಿ ಹಾಗೂ ಇತರ ನೌಕರ ವರ್ಗದವರಿಗೆ ಲಂಚ ಕೊಡುವುದು ಅನಿವಾರ್ಯ ಎನ್ನುವಂತಾಗಿದೆ. ಇದರ ಜೊತೆಗೆ ಇ- ಖಾತೆಗಳನ್ನು ಮಾಡಿಸಿಕೊಡುವುದಾಗಿ ದಲ್ಲಾಳಿಗಳು ಆಸ್ತಿ ಮಾಲೀಕರಿಂದ ಹೆಚ್ಚಿನ ಹಣವನ್ನು ವಸೂಲಿ ಮಾಡುತ್ತಿದ್ದಾರೆ.
ಸರ್ಕಾರದ ಅನೇಕ ಯೋಜನೆಗಳು ಪರೋಕ್ಷವಾಗಿ ಲಂಚಕೋರ ನೌಕರ ವರ್ಗದವರಿಗೆ ವರದಾನವಾಗಿ ಪರಿಣಮಿಸಿರುವುದು ದುರದೃಷ್ಟಕರ ಸಂಗತಿ. ಇ -ಖಾತಾ ಅರ್ಜಿ ಸಲ್ಲಿಕೆ ಕೆಲವು ಕಡೆ ಆನ್ ಲೈನ್ ಆಗಿರುವುದು ಒಳ್ಳೆಯ ಬೆಳವಣಿಗೆಯಾದರೂ ಲಂಚಕೋರ ಅಧಿಕಾರಿಗಳು ಹಾಗೂ ನೌಕರ ವರ್ಗದವರು ಬೇರೆ ಬೇರೆ ದಾರಿಗಳನ್ನು ಹುಡುಕಿಕೊಂಡಿರುತ್ತಾರೆ. ಕಂದಾಯ ಸಚಿವರು ಕೂಡಲೇ ಲಂಚದ ಹಾವಳಿಗೆ ಕಡಿವಾಣ ಹಾಕಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಕೆ.ವಿ.ವಾಸು, ವಿವೇಕಾನಂದ ನಗರ, ಮೈಸೂರು
ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್ಟಿಎಂ) ಶಾಲೆ’…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…
ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…
ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…
ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…